Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ವಿರುದ್ಧ ಮುನಿಸಿಕೊಂಡ ಶ್ರೀರಾಮುಲು ಅವರ ಹೊಸ ಡಿಮ್ಯಾಂಡ್‌ ಏನು ಗೊತ್ತಾ

Sampriya
ಶುಕ್ರವಾರ, 31 ಜನವರಿ 2025 (15:29 IST)
Photo Courtesy X
ಬೆಂಗಳೂರು: ಆಪ್ತ ಸ್ನೇಹಿತನಾಗಿದ್ದ ಜನಾರ್ದನ ರೆಡ್ಡಿ ಮತ್ತು ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡರೋ ಶ್ರೀರಾಮುಲು ಅವರನ್ನ ಸಮಾಧಾನ ಮಾಡಲು ಪಕ್ಷದ ರಾಷ್ಟ್ರೀಯ ನಾಯಕರು ಕಸರತ್ತು ಮಾಡ್ತಿದ್ದಾರೆ. ಈ ನಡುವೆ ಶ್ರೀರಾಮುಲು ಇದೀಗ ಹೊಸ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಪಕ್ಷದ ನಾಯಕರು ಎಷ್ಟೇ ಕರೆ ಮಾಡಿ ಕರೆದರೂ ಪಕ್ಷದ ನಾಯಕರಿಂದ ಶ್ರೀರಾಮುಲು ದೂರವೇ ಉಳಿಯುತ್ತಿದ್ದಾರೆ. ಸದ್ಯ ಪಕ್ಷದಲ್ಲಿ ಯಾವುದೇ ಹುದ್ದೇ ಇಲ್ಲ, ವಿಧಾನಸಭೆ ಮತ್ತು ಲೋಕಸಭೆ ಎರಡರಲ್ಲೂ ಸೋತಿರೋ ಶ್ರೀರಾಮುಲು‌ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ದೆಹಲಿಗೆ ಬರುವಂತೆ ಸೂಚನೆ ನೀಡಿದ ಹಿನ್ನೆಲೆ ದೆಹಲಿ ಚುನಾವಣೆ ಮುಗಿದ ಬಳಿಕ ಹೈಕಮಾಂಡ್‌ ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ.

ಅಸ್ತಿತ್ವದ ಉಳಿವಿನ ಹೊರಾಟದಲ್ಲಿರುವ ಶ್ರೀರಾಮುಲು ಅವರು ರಾಜ್ಯಸಭಾ ಸದಸ್ಯತ್ವದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಸಕ್ರಿಯರಾಗಿ ಪಕ್ಷ ಕಟ್ಟಲು, ತಮಗೆ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಪಟ್ಟು ಹಿಡಿದಿದ್ದು, ಈ ಬಗ್ಗೆ ಹೈಕಮಾಂಡ್‌ ಮುಂದೆ ಪ್ರಸ್ತಾಪಿಸಲು ಸಿದ್ಧತೆ ನಡೆಸಿದ್ದಾರೆ.

ಆಂಧ್ರದ ರಾಜ್ಯಸಭೆ ಸದಸ್ಯ ವೈಎಸ್ಆರ್‌ಪಿ ಪಕ್ಷದ ವಿಜಯ ಸಾಯಿರೆಡ್ಡಿ ರಾಜೀನಾಮೆ ನೀಡಿದ್ದಾರೆ.  ಅವರ 4 ವರ್ಷದ ಅವಧಿ ಇನ್ನೂ ಬಾಕಿ ಇರೋ ಹಿನ್ನೆಲೆ ಆಂಧ್ರ ಕೋಟಾದಡಿ ರಾಜ್ಯಸಭೆ ಮಾಡುವಂತೆ ಮನವಿ ಮಾಡಲಿದ್ದಾರಂತೆ. ಈ ಬಗ್ಗೆ ಸೂಕ್ಷ್ಮವಾಗಿ ರಾಜ್ಯ ಮುಖಂಡ ಮೂಲಕ ಸಂದೇಶ ನೀಡಿರುವ ರಾಮುಲು, ದೆಹಲಿ ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments