Webdunia - Bharat's app for daily news and videos

Install App

ಆಸ್ತಿಕೊಡಲಿಲ್ಲ ಎಂಬ ಕಾರಣಕ್ಕೆ ಮಗ ತಂದೆಗೆ ಮಾಡಿದ್ದೇನು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ

Webdunia
ಬುಧವಾರ, 29 ಆಗಸ್ಟ್ 2018 (06:33 IST)
ಬೆಂಗಳೂರು : ಆಸ್ತಿಗಾಗಿ ಜನರು ಸಂಬಂಧಗಳನ್ನು ಲೆಕ್ಕಿಸದೆ ಎಂತಹ ಕ್ರೂರ ಕೃತ್ಯಕ್ಕೂ ಮುಂದಾಗುತ್ತಾರೆ ಎಂಬುದಕ್ಕೆ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದ ಘಟನೆ ಒಂದು ಸಾಕ್ಷಿಯಾಗಿದೆ.


ಆಸ್ತಿ ಬರೆದುಕೊಡಲಿಲ್ಲ ಅಂತಾ ಪಾಪಿ ಮಗ ಚೇತನ್ ಎಂಬಾತ ತನ್ನ ಬೆರಳುಗಳಿಂದಲೇ 65 ವರ್ಷದ ತಂದೆ ಪರಮೇಶ್ ಅವರ ಕಣ್ಣು ಕಿತ್ತು ಹಾಕಿದ್ದಾನೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಸುಮಾರು 12.30ಕ್ಕೆ ವೇಳೆ ನಡೆದಿದೆ.


ವಿಧಾನಸೌಧದ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ನಿವೃತ್ತ ನೌಕರರಾಗಿರುವ ಪರಮೇಶ್ ಶಾಕಾಂಬರಿ ನಗರದಲ್ಲಿ ಸ್ವಂತ ಮನೆ ಮಾಡಿಕೊಂಡು ನಿವೃತ್ತಿ ಜೀವನ ನಡೆಸುತ್ತಿದ್ದರು. ಅವರ ಎರಡನೇ ಮಗನಾಗಿರುವ ಚೇತನ್ ಒಬ್ಬ ಡ್ರಗ್ ಅಡಿಕ್ಟ್ ಆಗಿದ್ದು, ಮನೆಯಲ್ಲಿ ಹಣಕ್ಕಾಗಿ ಪೋಷಕರನ್ನು ಪದೇ ಪದೇ ಪೀಡಿಸುತ್ತಿದ್ದನಂತೆ. ಪೋಷಕರು ಹಣ ಕೊಡದೇ ಇದ್ದಾಗ ಆಸ್ತಿಯಲ್ಲಿ ಪಾಲು ಬೇಕೆಂದು ಹಠ ಹಿಡಿಯುತ್ತಾನಂತೆ.


ಅಂದು ಕೂಡ ಚೇತನ್ ಆಸ್ತಿಯಲ್ಲಿ ಪಾಲು ಬೇಕೆಂದು ತಂದೆಯೊಂದಿಗೆ ಜಗಳ ಮಾಡಿ ತನ್ನ ಬೆರಳುಗಳ ಉಗುರಿನ ಸಹಾಯದಿಂದ ತಂದೆಯ ಕಣ್ಣು ಗುಡ್ಡೆಯನ್ನು ಕಿತ್ತು ಬಿಸಾಕಿದ್ದಾನೆ. ಮತ್ತೊಂದು ಕಣ್ಣು ಸಂಪೂರ್ಣ ರಕ್ತಮಯವಾಗಿದೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ ಚೇತನ್ ನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.


ಗಾಯಗೊಂಡಿದ್ದ ಪರಮೇಶ್ ಅವರನ್ನು ಜೆ.ಪಿ.ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅವರನ್ನು ನೋಡಿದ ವೈದ್ಯರು ಎರಡು ಕಣ್ಣುಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments