ಎ. ಟಿ. ಎಂ. ಕಳ್ಳತನಕ್ಕೆ ಬ್ರೇಕ್ ಹಾಕಿದ ನಾಯಿ

Webdunia
ಮಂಗಳವಾರ, 5 ಜುಲೈ 2022 (14:41 IST)
ಜಾರ್ಖಂಡ್​ದ ಚೌಪರಾನ್ ಪೊಲೀಸ್ ಠಾಣೆಯ ಚೈತಿ ಗ್ರಾಮದ ಜಿಟಿ ರಸ್ತೆಯಲ್ಲಿರುವ ಮನೆಯೊಂದರ ನೆಲ ಮಹಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ರಾತ್ರಿ ವೇಳೆ ಗ್ಯಾಸ್ ಕಟರ್, ಎಲ್‌ಪಿಜಿ ಸಿಲಿಂಡರ್ ಮತ್ತು ಸುತ್ತಿಗೆಯೊಂದಿಗೆ ದರೋಡೆಕೋರರ ತಂಡವೊಂದು ದರೋಡೆ ನಡೆಸಲು ಮುಂದಾಗಿತ್ತು.

ಇನ್ನೇನು ದರೋಡೆ ಆಗೇಬಿಟ್ಟಿತು
ಇನ್ನೇನು ದರೋಡೆಕೋರರು ಎಟಿಎಂನಿಂದ ಹಣ ಕದ್ದೇ ಬಿಟ್ಟರು ಎಂಬಷ್ಟರಲ್ಲಿ ನಾಯಿಯೊಂದು ದರೋಡೆಯನ್ನು ತಡೆದಿದೆ. ₹27 ಲಕ್ಷ ಹಣ ಎಟಿಎಂನಲ್ಲಿ ಇತ್ತು ಎಂದು ಮೂಲಗಳು ತಿಳಿಸಿವೆ.

ಸಾಕು ನಾಯಿ ಹೆಸರೇನು ಗೊತ್ತೇ?
ಎಟಿಎಂ ಇರುವ ಮನೆ ಸುಧೀರ್ ಬರ್ನ್‌ವಾಲ್ ಎಂಬವರ ಒಡೆತನದಲ್ಲಿದೆ. ದರೋಡೆಕೋರರು ಎಟಿಎಂ ಬಳಿ ಕಸರತ್ತು ನಡೆಸುತ್ತಿರುವುದನ್ನು ಗಮನಿಸಿದ ಬರ್ನ್ವಾಲ್ ಅವರ ಸಾಕು ನಾಯಿ ಸಾಂಬಾ ಬೊಗಳಲು ಪ್ರಾರಂಭಿಸಿದೆ. ಅಷ್ಟು ಹೊತ್ತಿಗಾಗಲೇ ದರೋಡೆಕೋರರು ಯಂತ್ರವನ್ನು ಬಹುತೇಕ ಕತ್ತರಿಸುವುದನ್ನು ಮುಗಿಸಿದ್ದರು.

ಅರೇ! ಇಷ್ಟು ಹೊತ್ತಿಗೆ ಏಕೆ ಬೊಗಳುತ್ತಿದೆ ನಾಯಿ?
ಆದರೆ ನಾಯಿ ಜೋರಾಗಿ ಕೂಗುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಅರೇ, ನಾಯಿ ಏಕೆ ಈ ರಾತ್ರಿ ಇಷ್ಟು ಜೋರಾಗಿ ಬೊಗಳುತ್ತಿದೆ ಎಂದು ಮನೆಯಿಂದ ಹೊರಗೆ ಬಂದಿದ್ದಾರೆ. ಹೀಗೆ ಜನರು ಎಚ್ಚರಗೊಂಡು ಹೊರಗಡೆ ಬಂದಿದ್ದನ್ನು ಕಂಡು ಎಟಿಎಂ ಹಣ ಕದಿಯಲು ಬಂದಿದ್ದ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

Karnata Weather: ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಬಾಲಕ: ಮುಂದುವರಿದ ರಕ್ಷಣ ಕಾರ್ಯಾಚರಣೆ

ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗದ ಹುಲಿಕಲ್ ಘಾಟ್ ನಲ್ಲಿ ಮಣ್ಣುಕುಸಿತದಲ್ಲಿ ಮೂವರು ಕಾರ್ಮಿಕರ ಸಾವು: ಪರಿಹಾರ ಘೋಷಿಸಿದ ಸಿಎಂ

ಮುಂದಿನ ಸುದ್ದಿ
Show comments