Webdunia - Bharat's app for daily news and videos

Install App

ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ- ಸಿಎಂ

Webdunia
ಭಾನುವಾರ, 1 ಜನವರಿ 2023 (15:55 IST)
ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್​ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರೂ ಮಾಡಿದ್ದರು. ಈಗ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ತೋರಿಸುತ್ತೆ. ಕಾಂಗ್ರೆಸ್​ ನಾಯಕರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. MOF ಕ್ಲಿಯರೆನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳಿದರು. ಇನ್ನು ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸುತ್ತೇವೆ ಎಂದರು. ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ, ಯಾರಿಗೂ ಅನ್ಯಾಯ ಮಾಡಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಲಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದುರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments