Webdunia - Bharat's app for daily news and videos

Install App

ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ

Webdunia
ಮಂಗಳವಾರ, 23 ಮೇ 2023 (12:48 IST)
5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಗೆ ಫಲಾನುಭವಿಗಳ ಅಂಕಿಅಂಶ ಅಗತ್ಯವಿದೆ. 10 ಕೆ.ಜಿ ಅಕ್ಕಿ ಗ್ಯಾರಂಟಿಯನ್ನು ಬಿಪಿಎಲ್ ಕಾರ್ಡ್ದಾರರಿಗೆ ಕೊಟ್ಟು ನಿಭಾಯಿಸಬಹುದು. ಆದರೆ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆ ಜಾರಿಗೆ ಸರಿಯಾದ ಅಂಕಿಅಂಶಗಳು ಬೇಕು.

200 ಯೂನಿಟ್ ಉಚಿತ ವಿದ್ಯುತ್ಗೆ ಎಷ್ಟು ಫಲಾನುಭವಿಗಳು ಇದ್ದಾರೆ ಎಂಬ ಮಾಹಿತಿ ಇಲ್ಲ. ಯಾರಿಗೆ ಕೊಡಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಪ್ರಚಾರ ಭಾಷಣದಲ್ಲಿ ಜನರಿಗೆ, ಸರ್ಕಾರಿ ನೌಕರರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಜೂನ್ ತಿಂಗಳಿನಿಂದ ಯಾರೂ ವಿದ್ಯುತ್ ಬಿಲ್ ಪಾವತಿಸಬೇಡಿ ಎಂದು ಘೋಷಣೆ ಮಾಡಿದ್ದರು. ಈ 200 ಯೂನಿಟ್ ಫ್ರೀ ವಿದ್ಯುತ್ಗೆ 1,200 ಕೋಟಿ ರೂ. ತಗಲಬಹುದು ಎಂದು ಸರ್ಕಾರ ಅಂದಾಜು ಮಾಡಿದೆ. 

ಗೃಹಲಕ್ಷ್ಮಿ ಫಲಾನುಭವಿಗಳ ಮಾಹಿತಿಯೂ ಇಲ್ಲ. ಫಲಾನುಭವಿಗಳ ಬ್ಯಾಂಕ್ ಖಾತೆ ವಿವರವೂ ಇಲ್ಲ. ಉಚಿತ ಬಸ್ ಪಾಸ್ ಎಷ್ಟು ಜನರಿಗೆ ಕೊಡಬೇಕು ಎಂಬ ಅಂಕಿಅಂಶಗಳು ಇಲ್ಲ. ಮೊದಲ ಕ್ಯಾಬಿನೆಟ್ನಲ್ಲಿ  ಕರ್ನಾಟಕದ ಮಹಿಳೆಯರಿಗೆ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದರು. ಪ್ರಚಾರ ಭಾಷಣದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಎಲ್ಲಾ ಕಡೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು ಎಂದು ಭರವಸೆ ನೀಡಿದ್ದರು.

ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನೀಡುವ ಯುವ ನಿಧಿ  ಭತ್ಯೆಗೆ ಫಲಾನುಭವಿಗಳ ಸಂಖ್ಯೆ ಕಂಡುಹಿಡಿಯುವುದು ಹೇಳಿದಷ್ಟು ಸುಲಭವಿಲ್ಲ. ಕೇಂದ್ರ ಸರ್ಕಾರ ರೈತರಿಗೆ ನೀಡುವ ಕೃಷಿ ಸಮ್ಮಾನ್ ಯೋಜನೆಯಲ್ಲಿ ರೈತರ ಕೃಷಿ ಭೂಮಿ ಲಿಂಕ್ ಆಗಿರುತ್ತದೆ. ಈ ಕಾರಣಕ್ಕೆ ಭೂಮಿ ಹೊಂದಿರುವ ರೈತರ ಖಾತೆಗಳಿಗೆ ಮಾತ್ರ ಹಣ ಜಮೆ ಆಗುತ್ತದೆ. ಆದರೆ ಇಲ್ಲಿ ನಿರುದ್ಯೋಗಿ ಎಂದು  ಕಂಡು ಹಿಡಿಯುವುದು ಹೇಗೆ? ಮಾನದಂಡ ಏನು ಎನ್ನುವುದೇ ಸದ್ಯದ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments