ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

Krishnaveni K
ಮಂಗಳವಾರ, 1 ಜುಲೈ 2025 (09:55 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ ಮಂಜುನಾಥ್ ನಮ್ಮ ಹೃದಯ ಕಾಪಾಡಿಕೊಳ್ಳಲು ಯಾವತ್ತೂ ಹೇಳುವ ಈ ಟಿಪ್ಸ್ ತಪ್ಪದೇ ಪಾಲಿಸಬೇಕು.

ಹೃದಯ ರೋಗ ತಜ್ಞರೆಂದರೆ ಮೊದಲು ನೆನಪಿಗೆ ಬರುವವರೇ ಡಾ ಸಿ ಮಂಜುನಾಥ್. ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಅವರು ಮಾಡಿರುವ ಸಾಧನೆಗಳೇ ಅಂತಹದ್ದು. ಇದೀಗ ಸಂಸದರಾಗಿದ್ದರೂ ವೈದ್ಯ ವೃತ್ತಿಯನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಇತ್ತೀಚೆಗೆ ಯುವಜನಾಂಗದಲ್ಲೂ ಕಾಡುತ್ತಿರುವ ಹೃದಯಾಘಾತದ ಬಗ್ಗೆ ಅವರು ಅಮೂಲ್ಯ ಸಲಹೆಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದ್ದಾರೆ.

-ರಕ್ತದೊತ್ತಡ ಬಾರದಂತೆ ನಮ್ಮ ಜೀವನ ಶೈಲಿಯಿರಬೇಕು. ರಕ್ತದೊತ್ತಡವೇ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಬಹುದು.
-ಮಧುಮೇಹವೂ ಹೃದಯದ ಸಮಸ್ಯೆಗೆ ಕಾರಣವಾಗುತ್ತದೆ. ಹೀಗಾಗಿ ಆಹಾರ ಶೈಲಿಯ ಮೇಲೂ ನಿಯಂತ್ರಣವಿರಬೇಕು.
-ಕೊಲೆಸ್ಟ್ರಾಲ್ ಇರುವ ಆಹಾರವನ್ನು ಸೇವಿಸಬಾರದು. ಇದರಿಂದ ಹೃದ್ರೋಗ ಬರುವ ಸಾಧ್ಯತೆ ಹೆಚ್ಚು. ಆಹಾರ ಶೈಲಿ ಆರೋಗ್ಯಯುತವಾಗಿರಬೇಕು.
-ಅತಿಯಾದ ಆಸೆ ಇರಬಾರದು. ಮನುಷ್ಯನಿಗೆ ಆಸೆ ಸಹಜ. ಆದರೆ ಅದು ಅತಿಯಾದರೆ ದೇಹಾರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
-ಮಾನಸಿಕ ಒತ್ತಡ, ಟೆನ್ಷನ್, ಇನ್ನೊಬ್ಬರ ಬಗ್ಗೆ ಕೆಡುಕು ಯೋಚನೆ ಬಿಡಬೇಕು. ಮಾನಸಿಕವಾಗಿ ಶಾಂತಿ, ನೆಮ್ಮದಿ, ಸಂತೋಷವಿದ್ದರೆ ಹೃದಯವೂ ಚೆನ್ನಾಗಿರುತ್ತದೆ.
-ಪ್ರತಿನಿತ್ಯ ವಾಕಿಂಗ್, ವ್ಯಾಯಾಮ ಮಾಡಬೇಕು. ವ್ಯಾಯಾಮ ಅತಿಯಾದರೂ ಕಷ್ಟ. ನಮ್ಮ ದೇಹ ತಾಳಿಕೊಳ್ಳುವಷ್ಟು ದೈಹಿಕ ಕಸರತ್ತು, ವಾಕಿಂಗ್ ಹೃದಯವನ್ನೂ ಕಾಪಾಡುತ್ತದೆ.

ಇವಿಷ್ಟು ಮಾಡಿಕೊಂಡರೆ ನಮ್ಮ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದು ಡಾ ಸಿ ಮಂಜುನಾಥ್ ಅವರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments