Webdunia - Bharat's app for daily news and videos

Install App

ಡಿಕೆ ಸುರೇಶ್ ವಿರುದ್ಧ 40 ಸಾವಿರ ಮತಗಳಿಂದ ಡಾ ಸಿಎನ್ ಮಂಜುನಾಥ್ ಗೆಲ್ಲುತ್ತಾರಂತೆ

Krishnaveni K
ಶುಕ್ರವಾರ, 31 ಮೇ 2024 (12:39 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನ ಡಿಕೆ ಸುರೇಶ್ ಮತ್ತು ಬಿಜೆಪಿಯಿಂದ ಹೃದ್ರೋಗ ತಜ್ಞ, ಸಮಾಜ ಸೇವಕ ಡಾ ಸಿಎನ್ ಮುಂಜುನಾಥ್ ನಡುವೆ ತೀವ್ರ ಪೈಪೋಟಿಯಿದೆ.

ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಇಡೀ ಕರ್ನಾಟಕವೇ ಎದಿರು ನೋಡುತ್ತಿದೆ. ಯಾಕೆಂದರೆ ಡಿಕೆ ಸುರೇಶ್ ಕಾಂಗ್ರೆಸ್ ನ ಪ್ರಮುಖ ನಾಯಕ. ಕಳೆದ ಬಾರಿ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸೋತಿದ್ದಾಗ ಕರ್ನಾಟಕದಿಂದ ಏಕಾಂಗಿಯಾಗಿ ಕಾಂಗ್ರೆಸ್ ನಿಂದ ಗೆದ್ದವರು ಡಿಕೆ ಸುರೇಶ್.

ಅಷ್ಟೇ ಅಲ್ಲದೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹೋದರ. ಹೀಗಾಗಿ ಕಾಂಗ್ರೆಸ್ ಗೆ ಇದು ಪ್ರತಿಷ್ಠೆಯ ಕಣ. ಇವರ ವಿರುದ್ಧ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸಿರುವ ಹೃದ್ರೋಗ ತಜ್ಞ, ಸಮಾಜ ಸೇವಕ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸಿದ್ದಾರೆ.

ಕಳಂಕ ರಹಿತರಾಗಿರುವ ಮಂಜುನಾಥ್ ಗೆ ಸಮಾಜದಲ್ಲಿ ಒಳ್ಳೆಯ ಹೆಸರಿದೆ. ಹೀಗಾಗಿ ಇಬ್ಬರ ನಡುವೆ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲವಾಗಿದೆ. ಈ ನಡುವೆ ಸೋಷಿಯಲ್ ಮೀಡಿಯಾ ಸಮೀಕ್ಷೆಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್ ವಿರುದ್ಧ ಮಂಜುನಾಥ್ 40 ಸಾವಿರ ಮತಗಳಿಂದ ಗೆಲ್ಲುತ್ತಾರೆ ಎಂಬ ಸುದ್ದಿ ಹರಿದಾಡಿದೆ. ಜೂನ್ 4 ಫಲಿತಾಂಶ ದಿನಕ್ಕೆ ಕ್ಷಣಗಣನೆ ಶುರುವಾಗಿದ್ದು, ಆ ದಿನ ಎಲ್ಲಾ ಕುತೂಹಲಕ್ಕೆ ತೆರೆ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments