ಜಯನಗರ ವಾಣಿಜ್ಯ ಸಂಕೀರ್ಣ(ಕಾಂಪ್ಲೆಕ್ಸ್)ದ ಬಳಿ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಬುಧವಾರ, 8 ಫೆಬ್ರವರಿ 2023 (19:22 IST)
ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣ(ಕಾಂಪ್ಲೆಕ್ಸ್)ದ ಬಳಿ ಪಾದಚಾರಿ ಮಾರ್ಗ, ಪಾರ್ಕಿಂಗ್ ಪ್ರದೇಶ, ಮಾರುಕಟ್ಟೆ ಕಾರಿಡಾರ್ ಮತ್ತು ಅಕ್ಕಪಕ್ಕದ ಸುಮಾರು 250 ತಾತ್ಕಾಲಿಕ ಮಳಿಗೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.
 
ಜಯನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ: 169ರ ವ್ಯಾಪ್ತಿಯಲ್ಲಿ ಮಾನ್ಯ ಮುಖ್ಯ ಆಯುಕ್ತರು, ಮಾನ್ಯ ವಲಯ ಆಯುಕ್ತರು(ದಕ್ಷಿಣ) ಹಾಗೂ ಸ್ಥಳೀಯ ಶಾಸಕರು, ಜಯನಗರ ವಿಧಾನಸಭಾ ಕ್ಷೇತ್ರ ರವರು ದಿನಾಂಕ:27-01-2023 ರಂದು ಜಯನಗರ ವಾಣಿಜ್ಯ ಸಂಕೀರ್ಣದ ತಪಾಸಣೆಯ ಸಮಯದಲ್ಲಿ ಕೈಗೊಂಡ ತೀರ್ಮಾನದಂತೆ, ಇಂದು ವಲಯ ಜಂಟಿ ಆಯುಕ್ತರು(ದಕ್ಷಿಣ), ಮುಖ್ಯ ಅಭಿಯಂತರರು(ದಕ್ಷಿಣ) ರವರ ನೇತೃತ್ವದಲ್ಲಿ ಪೊಲೀಸ್ ಹಾಗೂ ಮಾರ್ಷಲ್‌ಗಳ ನೆರವಿನೊಂದಿಗೆ ಒತ್ತುವರಿ ತೆರವುಗೊಳಿಸಲಾಗಿದೆ.
 
ಜಯನಗರ ವಾಣಿಜ್ಯ ಸಂಕೀರ್ಣದ ಸೆಟ್ ಬ್ಯಾಕ್ ಪ್ರದೇಶಗಳು ಮತ್ತು ಕಾರಿಡಾರ್‌ಗಳಲ್ಲಿ ಹಾಗೂ ಸುತ್ತಮುತ್ತ ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ-ವಹಿವಾಟುಗಳನ್ನು ನಡೆಸಿ, ಸಾರ್ವಜನಿಕರಿಗೆ ಅನಾನುಕೂಲ ಉಂಟು ಮಾಡುತ್ತಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಸ್ಥಳೀಯ ಪೊಲೀಸ್ ಇಲಾಖೆಯ ನೆರವಿನೊಂದಿಗೆ ತೆರವುಗೊಳಿಸಲಾಯಿತು ಹಾಗೂ ಇನ್ನು ಮುಂದೆ ಒತ್ತುವರಿ ಮಾಡಿಕೊಂಡು, ವ್ಯಾಪಾರ-ವಹಿವಾಟು ಮಾಡದಂತೆ ಎಚ್ಚರಿಗೆ ನೀಡಿ, ಯಾವುದೇ ಒತ್ತುವರಿಯಾಗದಂತೆ ತಡೆಯಲು ಮಾರ್ಷಲ್‌ಗಳನ್ನು ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments