Webdunia - Bharat's app for daily news and videos

Install App

ಜೈಲಿನಿಂದ ಬಾಹರ್ ಮರದ ಮೇಲೆ ಅಂದರ್

Webdunia
ಬುಧವಾರ, 13 ಜುಲೈ 2022 (17:03 IST)
ಅಪರಾಧಿಯೋರ್ವ ಜೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ ಮರದ ಮೇಲೆ ಸಿಲುಕಿಕೊಂಡಿದ್ದಾನೆ.
 
ತಿರುವನಂತಪುರಂ: ಪೂಜಾಪ್ಪುರ ಕೇಂದ್ರ ಕಾರಾಗೃಹದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಯೊಬ್ಬರು ಅಲ್ಲಿಂದ ಪರಾರಿಯಾಗಲು ಹೋಗಿ ಮರದ ಮೇಲೆ ಸಿಲುಕಿಕೊಂಡಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಮರದ ಕೆಳಗೆ ಬಲೆ ಹಾಕಿ ಆತನನ್ನು ಕೆಳಗೆ ಕರೆತರಲಾಗಿದೆ.
 
ಇಂದು ಮಧ್ಯಾಹ್ನ ಪೂಜಾಪುರ ಕೇಂದ್ರ ಕಾರಾಗೃಹದ ಮುಂದೆ ನಾಟಕೀಯ ದೃಶ್ಯಗಳು ಕಂಡು ಬಂದಿವೆ. ಅಪರಾಧಿಯನ್ನು ಸಮಾಧಾನಪಡಿಸಲು ಮೂವರು ಪೊಲೀಸ್ ಸಿಬ್ಬಂದಿ ಮರದ ಮೇಲೆ ಹತ್ತಿದಾಗ, ಅವನು ಮರದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಒಂದು ಗಂಟೆಗೂ ಹೆಚ್ಚು ಕಾಲ ಆರೋಪಿಯನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಆತ ಕೆಳಗಿಳಿಯಲು ಒಪ್ಪಲಿಲ್ಲ. ಆದರೆ, ಇದ್ದಕ್ಕಿದ್ದಂತೆ ಆತ ಕುಳಿತಿದ್ದ ಕೊಂಬೆ ಮುರಿದು, ಪೊಲೀಸರು ಹಾಕಿದ್ದ ಬಲೆಗೆ ಬಿದ್ದಿದ್ದಾನೆ.
 
ಜೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ ಮರದ ಮೇಲೆ ಸಿಲುಕಿದ ಅಪರಾಧಿ
ಬಿದ್ದ ವೇಳೆ ಬಲೆ ಇದ್ದ ಕಾರಣ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ನಂತರ ಆಂಬ್ಯುಲೆನ್ಸ್​​ನಲ್ಲಿ ಜೈಲಿಗೆ ಕರೆದೊಯ್ಯಲಾಗಿದೆ. ಕೊಟ್ಟಾಯಂ ಮೂಲದ ಸುಭಾಷ್ ಕೊಲೆ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಎರಡು ವಾರಗಳ ಹಿಂದೆ ನೆಟ್ಟುಕಲ್ತೇರಿ ತೆರೆದ ಕಾರಾಗೃಹದಿಂದ ಇಲ್ಲಿಗೆ ಸ್ಥಾಳಾಂತರಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments