Webdunia - Bharat's app for daily news and videos

Install App

ಗುಂಡಾಗಿರಿ ಪ್ರಕರಣದ ಆರೋಪಿಗಳ ಗಡಿಪಾರಿಗೆ ಈಶ್ವರಪ್ಪ ಒತ್ತಾಯ

Webdunia
ಮಂಗಳವಾರ, 20 ಫೆಬ್ರವರಿ 2018 (15:43 IST)
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪವಾಗಿದ್ದು, ಪ್ರಕರಣದ ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
 
ಕಲಾಪ ಆರಂಭವಾದಾಗ ನಿಲುವಳಿ ಸೂಚನೆ ಪ್ರಸ್ತಾಪ ಮಂಡಿಸಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಹಲ್ಲೆ, ಹತ್ಯೆ, ಕೊಲೆ, ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
 
ಶಾಸಕರ ಪುತ್ರ ಮೊಹಮ್ಮದ್ ನಲಪಾಡ್ ವಿರುದ್ಧ 11 ಪ್ರಕರಣಗಳು ದಾಖಲಾಗಿವೆ. ಆದರೆ, ಗುಂಡಾ ಕಾಯ್ದೆ ಜಾರಿಗೊಳಿಸಿಲ್ಲ, ಗಡಿಪಾರು ಮಾಡಿಲ್ಲ. ಹಲ್ಲೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದೆಯೇ ಎಂದು ಕಿಡಿ ಕಾರಿದ್ದಾರೆ.
 
ಕೆ.ಆರ್.ಪುರಂ ಬಿಬಿಎಂಪಿ ಕಚೇರಿಯಲ್ಲೂ ಕಾಂಗ್ರೆಸ್‌ ಪಕ್ಷದ ಮುಖಂಡನಿಂದ ದಾಂಧಲೆ ನಡೆದಿದೆ, ಕಚೇರಿಗೆ ಬೆಂಕಿ ಹಚ್ಚು ಸುಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಮುಖ್ಯಮಂತ್ರಿಗೆ ಹಾಗೂ ಗೃಹ ಸಚಿವರಿಗೆ ಶೋಭೆ ತರುತ್ತದೆಯೇ ಎಂದು ಕೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments