Webdunia - Bharat's app for daily news and videos

Install App

ತಮಿಳು ನಾಡಗೀತೆ ನಿಲ್ಲಿಸಿ ಕನ್ನಡದ ನಾಡಗೀತೆ ಹಾಕಿಸಿದ ಈಶ್ವರಪ್ಪ

Webdunia
ಗುರುವಾರ, 27 ಏಪ್ರಿಲ್ 2023 (15:04 IST)
ಶಿವಮೊಗ್ಗ : ವಿಧಾನಸಭಾ ಚುನಾವಣೆ ಹಿನ್ನೆಲೆ ತಮಿಳು ಭಾಷಿಗ ಮತದಾರರ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಶಿವಮೊಗ್ಗದಲ್ಲಿ ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿದ್ದಾಗ ಕಾರ್ಯಕರ್ತರೊಬ್ಬರು ತಮಿಳಿನ ನಾಡಗೀತೆ ಹಾಕಿದ್ದರು.
 
ಈ ವೇಳೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅದನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಹಾಕಿಸಿದ ಪ್ರಸಂಗ ನಡೆಯಿತು. ಶಿವಮೊಗ್ಗ ನಗರ ಹಾಗೂ ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮಿಳು ಮತದಾರರಿದ್ದಾರೆ.

ಈ ಹಿನ್ನೆಲೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಬಿಜೆಪಿ ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿತ್ತು. ಸಮಾವೇಶದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಮಾಜಿ ಸಚಿವ ಈಶ್ವರಪ್ಪ, ಅಭ್ಯರ್ಥಿ ಚನ್ನಬಸಪ್ಪ ಭಾಗಿಯಾಗಿದ್ದರು.

ಈ ವೇಳೆ ಸಮಾವೇಶದಲ್ಲಿ ತಮಿಳು ಪ್ರಾರ್ಥನೆ ಪ್ಲೇ ಆಗಿದೆ. ತಕ್ಷಣವೇ ಎಚ್ಚೆತ್ತ ಮಾಜಿ ಸಚಿವ ಈಶ್ವರಪ್ಪ, ಏಯ್ ಇದು ಯಾವ ಪ್ರಾರ್ಥನೆ? ನಾಡಗೀತೆ ಹಾಕಪ್ಪ. ನಿಮ್ಮಲ್ಲಿ ಯಾರಾದರೂ ನಾಡಗೀತೆ ಹಾಡುತ್ತೀರಾ ಎಂದು ನೆರೆದಿದ್ದವರನ್ನು ಈಶ್ವರಪ್ಪ ಕೇಳಿದ್ದಾರೆ. ಬಳಿಕ ಆಯೋಜಕರು ತಮಿಳಿನ ಪ್ರಾರ್ಥನೆಯನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಪ್ಲೇ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments