Publish Date: Wed, 19 Aug 2026 (09:25 IST)
Updated Date: Wed, 19 Aug 2026 (09:27 IST)
ಬೆಂಗಳೂರು: ತಿಪಟೂರು ಕ್ಷೇತ್ರದ ಮಾಜಿ ಶಾಸಕರು ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಶ್ರೀ ಬಿ.ಸಿ.ನಾಗೇಶ್ (65 ವರ್ಷ) ಅವರು ಇಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ಮೃತಪಟ್ಟರು. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇಂದು ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ. ನಾಳೆ ಸರ್ಕಾರೀ ಗೌರವಗಳೊಂದಿಗೆ ತಿಪಟೂರಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ಬಿ.ಸಿ.ನಾಗೇಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ