Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಭೇಟಿಯಾಗಿದ್ದಾರೆ.
ಈ ಮೂಲಕ ಹೊರಟ್ಟಿ ಬಿಜೆಪಿ ಸೇರ್ಪಡೆ ಅಮಿತ್ ಷಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮೂಲಕ 42 ವರ್ಷಗಳ ಕಾಲ ಜೆಡಿಎಸ್ನಲ್ಲಿದ್ದ ಹೊರಟ್ಟಿ ಬಿಜೆಪಿ ಸೇರುವುದು ಸನ್ನಿಹಿತವಾಗಿದೆ.
ಈ ಬಗ್ಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿಮ್ಮಂಥಹವರು ಪಕ್ಷಕ್ಕೆ ಬರಬೇಕು ಅಂತಾ ಅಮಿತ್ ಶಾ ಹೇಳಿದರು ಎಂದರು.
ಜೆಡಿಎಸ್ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಈಗ ಬದಲಾದ ವ್ಯವಸ್ಥೆಯಲ್ಲಿ ಮತದಾರರು ಅಭಿಪ್ರಾಯ ಎಲ್ಲಾ ಆಧಾರದ ಮೇಲೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬಸವ ಜಯಂತಿ ಶುಭಾಶಯ. ಜೊತೆಗೆ ಇವತ್ತು ಸಿಹಿ ಬಿಜೆಪಿಗೆ ಸಿಕ್ಕಿದೆ. ಹೊರಟ್ಟಿ ಬಿಜೆಪಿ ಸೇರುವ ಮನಸ್ಸು ಮಾಡಿದ್ದಾರೆ.