ಕರೊನಾ ಹೆಚ್ಚಳವಾದರೆ ಲಾಕ್ ಡೌನ್ ಮಾಡಿ ತಜ್ಞರ ಶಿಫಾರಸು

Webdunia
ಭಾನುವಾರ, 2 ಜನವರಿ 2022 (17:21 IST)
ರಾಜ್ಯದಲ್ಲಿ ಮೂರನೇ ಅಲೆ ಬರುವ ಸಾಧ್ಯತೆಯಿದ್ದು, ಒಂದು ವೇಳೆ ಕೋವಿಡ್ ಪ್ರಕರಣಗಳು ಹೆಚ್ಚಳವಾದರೆ ಸೆಮಿ ಲಾಕ್‍ಡೌನ್ ಇಲ್ಲವೇ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಬಹುತೇಕ ಖಚಿತವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಶೇ.5ಕ್ಕಿಂತ ಪಾಸಿಟಿವ್ ದರ ಹೆಚ್ಚಾದರೆ ಅನಿವಾರ್ಯವಾಗಿ ಲಾಕ್‍ಡೌನ್ ಮಾಡಬೇಕೆಂದು ಸಲಹೆ ಮಾಡಿದೆ.
 
ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತದೆ. ಕರ್ನಾಟಕದಲ್ಲೂ ಮೂರು ದಿನದಿಂದ ಪ್ರಕರಣಗಳು ಏರುಮುಖವಾಗುತ್ತಿದ್ದು. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಹಾಗೂ ಶೇ.40ಕ್ಕಿಂತ ಹೆಚ್ಚು ಐಸಿಯು ಬೆಡ್ ರೋಗಿಗಳ ಸಂಖ್ಯೆ ಹೆಚ್ಚಳವಾದರೆ ಲಾಕ್‍ಡೌನ್ ಮಾಡಲೇಬೇಕೆಂದು ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.
 
ರಾಜ್ಯ ಸರ್ಕಾರ ತಕ್ಷಣವೇ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕದೊಂಡು ಕೋವಿಡ್ ನಿಯಂತ್ರಿಸಲು ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಇದನ್ನು ತಡೆಯದಿದ್ದರೆ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
 
ಈಗ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತಾಂತ್ರಿಕ ಸಲಹಾ ಸಮಿತಿ ಮಹಾರಾಷ್ಟ್ರ, ಕೇರಳ, ತಮಿಳುನಾಡು ಹಾಗೂ ವಿದೇಶದಿಂದ ಬರುವವರ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಆದರೆ ಹೊರ ರಾಜ್ಯದಿಂದ ಬರುತ್ತಿರುವವರ ಮೇಲೆ ನಿಗಾವಹಿಸುತ್ತಿಲ್ಲ ಎಂದು ಸಮಿತಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಬಸವರಾಜ ಬೊಮ್ಮಾಯಿ

ಹೋರಾಟಕ್ಕೆ ಮತ್ತೊಂದು ಹೆಸರು ಬಿಎಸ್‍ವೈ: ವಿಜಯೇಂದ್ರ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ವರುಣಾರ್ಭಟ

ಮತಗಟ್ಟೆ ಸಮೀಕ್ಷೆ ಉಲ್ಟಾ ಆಗಲಿದೆ: ಟಿಎಂಸಿಗೆ ಭರ್ಜರಿ ಜಯ ಖಚಿತ ಎಂದ ಮಮತಾ ಬ್ಯಾನರ್ಜಿ

Labour Day 2026: ನಾಳೆ ಬ್ಯಾಂಕುಗಳು, ಶಾಲೆಗಳು, ಕಚೇರಿಗಳು ತೆರೆದಿವೆಯೇ

ಮುಂದಿನ ಸುದ್ದಿ
Show comments