Webdunia - Bharat's app for daily news and videos

Install App

ಕಾಂಗ್ರೆಸ್ ಬರುತ್ತಿದ್ದಂತೆ ಉಗ್ರ ಚಟುವಟಿಕೆಗಳು ಗರಿಗೆದರಿವೆ : ಮುತಾಲಿಕ್

Webdunia
ಬುಧವಾರ, 19 ಜುಲೈ 2023 (15:58 IST)
ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಗರಿಗೆದರಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸೆರೆ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟ್ಲೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೆಟ್ಟ ಹುಳಗಳು, ಹಾವು ಹಾಗೂ ಚೇಳುಗಳು ಹೊರ ಬರುತ್ತಿವೆ ಎಂದು ಕಿಡಿಕಾರಿದ್ದಾರೆ. 

ಇವರನ್ನು ಕಾಂಗ್ರೆಸ್ ಸರ್ಕಾರ ಪೋಷಿಸುತ್ತಿದೆ. ಇದೇ ರೀತಿ ಉಗ್ರರನ್ನು ಪೋಷಣೆ ಮಾಡಿ ದೇಶದ ಲಕ್ಷಾಂತರ ಜನರನ್ನು ಕಾಂಗ್ರೆಸ್ ಕೊಂದು ಹಾಕಿದೆ. ಇವರ ಅಧಿಕಾರದಿಂದ ಈ ರೀತಿಯ ಪ್ರಕರಣಗಳು ಇನ್ನೂ ಹೆಚ್ಚುತ್ತವೆ. ಬಂಧಿತರು ಲಷ್ಕರ್ ಎ ತೊಯ್ಬಾ ಸಂಘಟನೆಯ ಸಂಪರ್ಕದಲ್ಲಿರುವಂತವರು. ಅಷ್ಟೇ ಅಲ್ಲ ಬಿಜೆಪಿ ಸರ್ಕಾರ ಇದ್ದಾಗಲೂ ಕೂಡ ಹರ್ಷನ ಕೊಲೆಗಡುಕರು ಜೈಲಿನಲ್ಲಿ ತಮ್ಮ ಕುಟುಂಬದವರ ಜೊತೆ ಮಾತನಾಡುತ್ತಿದ್ದರು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments