Select Your Language

Notifications

webdunia
webdunia
webdunia
webdunia

ವಿದ್ಯುತ್ ತಗುಲಿ ತಂದೆ, ಮಗ ಸಾವು

ವಿದ್ಯುತ್ ತಗುಲಿ ತಂದೆ, ಮಗ ಸಾವು
ಬೆಳಗಾವಿ , ಶನಿವಾರ, 2 ಸೆಪ್ಟಂಬರ್ 2023 (18:00 IST)
ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ಮನೆ ಮುಂದಿನ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಪ್ರಭು ಹುಂಬಿ ಹಾಗೂ ಇವರ ಪುತ್ರ ಮಂಜುನಾಥ ಮೃತಪಟ್ಟವರು. ಮನೆ ಮುಂದಿನ‌ ವಿದ್ಯುತ್ ಕಂಬಕ್ಕೆ ಬ್ಯಾಲೆನ್ಸಿಗೆ ಹಾಕಲಾಗಿದ್ದ ತಂತಿಗೆ ಮೇನ್ ಲೈನ್ ವಿದ್ಯುತ್ ತಂತಿ ಜೋಡಿಸಲಾಗಿತ್ತು. ತಂತಿ ಸುತ್ತ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ಪ್ರಭು ಹುಂಬಿ ಅವರಿಗೆ ವಿದ್ಯುತ್ ತಗುಲಿದೆ. ಒದ್ದಾಡುತ್ತಿದ್ದ ಅವರನ್ನು ನೋಡಿ ಓಡಿ ಬಂದು ಪುತ್ರ ಮಂಜುನಾಥ ತಂದೆಯನ್ನು ಕಾಪಾಡಲು ಮುಂದಾದರು. ಅವರಿಗೂ ವಿದ್ಯುತ್ ತಗುಲಿದ್ದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಭು ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುನಾಥ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು. ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ಆವರಿಸಿದೆ. ಮೃತರ ಕುಟುಂಬದವರ ಆಕ್ರಂದನ‌ ಮುಗಿಲು ಮುಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿನಾಡಲ್ಲಿ ಬರಕ್ಕೆ 2ನೇ ಬಲಿ