ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ : ಬಿಎಸ್‍ವೈ

Webdunia
ಶನಿವಾರ, 23 ಜುಲೈ 2022 (17:15 IST)
ಬೆಂಗಳೂರು : ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ.

ಆದರೆ ವಿಜಯೇಂದ್ರನ ವಿಚಾರದಲ್ಲಿ ಹೈಕಮಾಂಡ್ ತಿರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದರು. ಆದರೆ ನಿಲ್ಲೋದಿಲ್ಲ, ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದೆ.

ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಒಂದು ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. 

ಕುಟುಂಬ ರಾಜಕೀಯದ ಆಗೋದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೋದಿ ಹೇಳಿದ್ದಾರೆ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ನನ್ನ ಮಗ ಸ್ಪರ್ಧಿಸುತ್ತಾನೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ನನಗೆ ಪಕ್ಷದಲ್ಲಿ ಸಾಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರಮಟ್ಟದಲ್ಲಿ ಬೆಳೆಸಿದ್ದಾರೆ ಎಂದು ತಿಳಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments