Select Your Language

Notifications

webdunia
webdunia
webdunia
webdunia

ತನ್ನದೇ ಕಚೇರಿಯಲ್ಲಿ ಕೊಲೆಯಾದ ಫೈನಾನ್ಶಿಯರ್!

kundapura
ಜು.30ರ ಶುಕ್ರವಾರ ಅವರದ್ದೇ ಫೈನಾನ್ಸ್ ನಲ್ಲಿ ನಡೆದಿದ್ದು ತಡರಾತ್ರಿ ಈ‌ ಪ್ರಕರಣ ಬೆಳಕಿಗೆ ಬಂದಿದೆ.
ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಫೈನಾನ್ಶಿಯರ್. ಹಣಕಾಸು ವಿಚಾರದಲ್ಲಿ‌ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಅಜೇಂದ್ರ ಕಳೆದ 5 ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಪಾಲುದಾರಿಕೆಯೊಂದಿಗೆ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲ ಕೂಡ ಅಜೇಂದ್ರ ತೊಡಗಿಸಿಕೊಂಡಿದ್ದರು.

ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಸಿಕೆಗಾಗಿ ಹೊಡೆದಾಡಿದ ಯುವಕರು!