Webdunia - Bharat's app for daily news and videos

Install App

ರಾಹುಲ್‌ ಕೆನ್ನೆಗೆ ಬಾರಿಸಬೇಕಿದ್ದ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್‌

Sampriya
ಬುಧವಾರ, 10 ಜುಲೈ 2024 (15:40 IST)
ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾವೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭರತ್ ಶೆಟ್ಟಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್‌ನ ಒಳಗೆ ಎರಡು ಕೆನ್ನೆಗೆ ಬಾರಿಸಬೇಕು. ಆಗ ಎಲ್ಲವೂ ಸರಿಹೋಗುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಕೈ ನಾಯಕರು ಖಂಡಿಸಿ ಆಕ್ರೋಶ ಹೊರಹಾಕಿದ್ದರು.

ಇದೀಗ ಪಾಲಿಕೆ ಸದಸ್ಯ ಅನಿಲ್ ಕುಮಾರ್‌ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353ರ ಅಡಿ ಡಾ.ವೈ ಭರತ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತುಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಕಾವೂರಿನಲ್ಲಿ ಸೋಮವಾರ ಪ್ರತಿಭಟನೆ ಏರ್ಪಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments