Webdunia - Bharat's app for daily news and videos

Install App

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಾಂಗ್ರೆಸ್‌ನವರ ಮೇಲೆ FIR ಹಾಕಿದ್ದೀರಾ: ಆರ್ ಅಶೋಕ್ ಪ್ರಶ್ನೆ

Sampriya
ಶನಿವಾರ, 30 ನವೆಂಬರ್ 2024 (17:59 IST)
Photo Courtesy X
ಬೆಂಗಳೂರು: ಕ್ರಿಮಿನಲ್ ಕೆಲ್ಸ್ ಮಾಡಿ ಜೈಶ್ರೀರಾಮ್ ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ ಎಂದು ಲೇವಡಿ ಮಾಡಿದ ಸಚಿವ ಪ್ರಿಯಾಂಕ ಖರ್ಗೆಗೆ ವಿಪಕ್ಷ ನಾಯಕ ಆರ್‌ ಅಶೋಕ್‌ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಚಿವ ಪ್ರಿಯಾಂಕ ಖರ್ಗೆ ಅವರೇ, ತಾವು ಒಂದು ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದೀರಿ. ಹಿಂದೂಗಳ ಬಗ್ಗೆ, ಹಿಂದೂ ಧಾರ್ಮಿಕ ಗುರುಗಳ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ.

"ಕ್ರಿಮಿನಲ್ ಕೆಲ್ಸ ಮಾಡಿ ಜೈ ಶ್ರೀರಾಮ" ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದೀರಿ.

ಕ್ರಿಮಿನಲ್ ಕೆಲಸ ಮಾಡಿರೋದು ಸ್ವಾಮೀಜಿ ಅಲ್ಲ. ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು ಕ್ರಿಮಿನಲ್ ಕೆಲಸ.
ಸಂವಿಧಾನ ರಕ್ಷಿಸಬೇಕಾದ ಜಾಗದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು ಆ ಸುದ್ದಿ ಬಿತ್ತರ ಮಾಡಿದ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ್ದು ಕ್ರಿಮಿನಲ್ ಕೆಲಸ.

ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿ ದೇಶದ್ರೋಹಿಗಳ ರಕ್ಷಣೆಗೆ ನಿಂತಿದ್ದು ಕ್ರಿಮಿನಲ್ ಕೆಲಸ.

ಇಷ್ಟಕ್ಕೂ FSL ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ದು ನಿಜ ಅಂತ ಸಾಬೀತಾಯಿತಲ್ಲ, ಆಮೇಲೆ ಮಾಧ್ಯಮಗಳಿಗೆ ಕ್ಷಮೆ ಕೇಳುವ ಕನಿಷ್ಠ ಸೌಜನ್ಯ ಆದರೂ ತಾವು ತೋರಿದರಾ?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ, ಒಂದು ಸಮುದಾಯವನ್ನು ಓಲೈಸುವುದಕ್ಕಾಗಿ ದೇಶದ್ರೋಹಿಗಳನ್ನೇ ಸಮರ್ಥನೆ ಮಾಡಿಕೊಳ್ಳುತ್ತೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದವರಿಗೆ ನಾಚಿಕೆ ಆಗುವುದಿಲ್ಲವಾ?

ಚಂದೇಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೇಳಿದ ಮೇಲೂ FIR ಹಾಕಿದ್ದೀರಲ್ಲ, ಇದು ದ್ವೇಷ ರಾಜಕಾರಣ ಅಲ್ಲದೆ ಮತ್ತೇನು?

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ FIR ಹಾಕಿದ್ದೀರಾ? ಅಂತಹ ಪುಡಾರಿಗಳನ್ನು ವಿಧಾನಸೌಧಕ್ಕೆ ಕರೆದುಕೊಂಡು ಬಂದ ತಮ್ಮ ತಂದೆಯವರ ಆಪ್ತ, ರಾಜ್ಯಸಭಾ ಸದಸ್ಯ @NasirHussainINC
 ಅವರ ಮೇಲೆ FIR ಹಾಕಿದ್ದೀರಾ?

ಈ ಘಟನೆ ನಡೆದು 9 ತಿಂಗಳಾದರೂ ಇನ್ನೂ ತಪ್ಪಿತಸ್ಥರನ್ನ ಪತ್ತೆ ಮಾಡದ ನಿಮ್ಮಿಂದ ನಾವು ಸಂವಿಧಾನ ರಕ್ಷಣೆಯ ಪಾಠ ಕಲಿಯಬೇಕಾ?

ಹಿಂದೂಗಳನ್ನು ಕಾಫಿರರು ಎಂದು ಹೇಳಿಕೊಡುವ ಧರ್ಮ ಯಾವುದು? ಜಿಹಾದ್ ಹೆಸರಿನಲ್ಲಿ ಇಡೀ ವಿಶ್ವದಲ್ಲಿ ಅಶಾಂತಿ ಉಂಟುಮಾಡುತ್ತಿರುವ ಧರ್ಮ ಯಾವುದು? ವೋಟ್ ಬ್ಯಾಂಕ್ ಗಾಗಿ ಆ ಧರ್ಮದ ಓಲೈಕೆ ಮಾಡುತ್ತಿರುವುದು ಯಾವ ಪಕ್ಷ ಅಂತ ಇಡೀ ದೇಶಕ್ಕೆ ಗೊತ್ತಿದೆ.

ಇತ್ತೀಚೆಗೆ ತಾವು ಎಲ್ಲದಕ್ಕೂ ಮೂಗು ತೂರಿಸಿಕೊಂಡು ಬರುವ ವಿಚಿತ್ರ ಧೋರಣೆ ನೋಡಿದರೆ ಬಹುಶಃ ತಾವೇ ಎಐಸಿಸಿ ಅಧ್ಯಕ್ಷರು ಎನ್ನುವ ಭ್ರಮೆಯಲ್ಲಿ ಇರುವಂತಿದೆ. ನಿಮ್ಮ ಸರ್ಕಾರದ ದುರಾಡಳಿತ, ನಿರ್ಲಕ್ಷ್ಯದಿಂದ ರಾಜ್ಯದಲ್ಲಿ 28 ಬಾಣಂತಿ ಮಹಿಳೆಯರು, 111 ನವಜಾತ ಶಿಶುಗಳ ದಾರುಣ ಸಾವಾಗಿದೆ. ಅದರ ಬಗ್ಗೆ ಮಾತಾಡಿ.

ಮುಸ್ಲಿಮರನ್ನು ಓಲೈಸುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ, ಹಿಂದೂ ಸಮಾಜದ ಧಾರ್ಮಿಕ ಮುಖಂಡರ ಬಗ್ಗೆ ಕೀಳಾಗಿ ಮಾತಾಡಿದರೆ ನಿಮ್ಮ ವಿರುದ್ಧ ಜನ ದಂಗೆ ಏಳುತ್ತಾರೆ, ಎಚ್ಚರಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments