Webdunia - Bharat's app for daily news and videos

Install App

ದಸರಾ ಆನೆ ಬಲರಾಮನಿಗೆ ಫೈರಿಂಗ್

Webdunia
ಭಾನುವಾರ, 18 ಡಿಸೆಂಬರ್ 2022 (12:01 IST)
ಮೈಸೂರು : ದಸರಾ ಆನೆ ಬಲರಾಮನಿಗೆ ಬಂದೂಕಿನಿಂದ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬಾತ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ ಚೇತರಿಸಿಕೊಂಡಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆತನಿಂದ ಬಂದೂಕು, ಕಾರ್ಟ್ರಿಜ್ನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಮುಂದಿನ ಸುದ್ದಿ
Show comments