Publish Date: Mon, 09 Sep 2019 (12:48 IST)
Updated Date: Mon, 09 Sep 2019 (12:50 IST)
ಕೊಪ್ಪಳ : ದೇಶದ ಮೊದಲ ಅಂತರಾಷ್ಟ್ರೀಯ ಯೋಗ ವಿಶ್ವವಿದ್ಯಾನಿಲಯ ನಿರ್ಮಿಸಲು ಕೊಪ್ಪಳದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ, ರಂಗಾಪುರ, ಹನುಮನಹಳ್ಳಿ, ಸಣಾಪುರ ಪ್ರದೇಶದಲ್ಲಿ ಅಧಿಕಾರಿಗಳೊಂದಿಗೆ ಆಗಮಿಸಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಸೂಕ್ತ ಸ್ಥಳಕ್ಕಾಗಿ ಪರಿಶೀಲನೆ ನಡೆಸಿದ್ದಾರೆ.
ಈಗಾಗಲೇ ಕೇಂದ್ರ ಸಚಿವರಾದ ಶ್ರೀಪಾದ ಯಸ್ಸೊ ಅವರ ಜೊತೆ ಒಂದು ಸುತ್ತಿನ ಚರ್ಚೆ ನಡೆಸಲಾಗಿದ್ದು, ಸ್ಥಳ ಪರಿಶೀಲನೆ ನಂತರ ಇನ್ನೊಂದು ಬಾರಿ ಕೇಂದ್ರ ತಂಡದ ಜೊತೆ ಆಗಮಿಸಿ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.