Webdunia - Bharat's app for daily news and videos

Install App

ಮೀನುಗಾರರ ಕಾರ್ಯಕ್ರಮಕ್ಕೆ ಚಾಲನೆ

Webdunia
ಶುಕ್ರವಾರ, 9 ಜುಲೈ 2021 (18:34 IST)
ಮಂಗಳೂರಿನ ಬೆಂಗರೆಯಲ್ಲಿ ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆಯ ವಿರುದ್ದ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ನೇತೃತ್ವದಲ್ಲಿ ದೋಣಿಯೊಂದಿಗೆ ಮೀನುಗಾರರ ಪ್ರತಿಭಟನೆ ನಡೆಯಿತು. ಇದೇ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ 
ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಾಗರ ಮಾಲಾ ಯೋಜನೆ ಮೀನುಗಾರರ ಭವಿಷ್ಯವನ್ನು ಕರಾಳಗೊಳಿಸುತ್ತಿದೆ. ಕಾರವಾರದಿಂದ ಮಂಗಳೂರುವರಗೆ  ಜಾರಿಗೊಳ್ಳುತ್ತಿರುವ ಸಾಗರ ಮಾಲಾ ಯೋಜನೆಯ ಪ್ರಾಜೆಕ್ಟ್ ಗಳು ಸ್ಥಳೀಯ ಮೀ‌ನುಗಾರರ ದುಡಿಮೆಯ ಅವಕಾಶಗಳನ್ನು ನಾಶಗೊಳಿಸುತ್ತಿರುವುದು ಯೋಜನೆ ಜಾರಿಯ ಆರಂಭದ ದಿನಗಳಲ್ಲೆ ಎದ್ದು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಇದು ಮೀನುಗಾರಿಕೆ ಉದ್ಯಮವನ್ನು ಸಾಂಪ್ರದಾಯಿಕವಾಗಿ ಮೀನುಗಾರಿಕೆಯನ್ನೇ ಅವಲಂಬಿಸಿರುವ ಸಮುದಾಯಗಳಿಂದ ಕಿತ್ತುಕೊಂಡು, ಕಾರ್ಪೊರೇಟ್ ಕಂಪೆನಿಗಳ ಪಾಲಾಗಿಸುವ ಹುನ್ನಾರವನ್ನು ಹೊಂದಿದೆ ಎಂದರು.
ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ದೊರೆತ ನಂತರ ಬೆಂಗರೆ, ತಣ್ಣೀರುಬಾವಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರು ಹಾಗೂ ಅವರ ಕುಟುಂಬಸ್ಥರು ತಮ್ಮ ದೋಣಿಗಳ ಮೇಲೆ, ಮನೆಗಳ ಮುಂಭಾಗ ತಮ್ಮ ಬೇಡಿಕೆಗಳ ಪ್ಲೇ ಕಾರ್ಡ್ ಹಿಡಿದು, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.  ನೂರಾರು ಸಂಖ್ಯೆಯಲ್ಲಿ ಮೀನುಗಾರ ಕುಟುಂಬಗಳು ಈ ವಿಶಿಷ್ಟ ರೀತಿಯ ಪ್ರತಿಭಟನೆಯಲ್ಲಿ ಭಾಗವಹಿಸಿ ಸರಕಾರದ ಗಮನ ಸೆಳೆಯಲು ಯತ್ನಿಸಿದರು. 
ಈ ಪ್ರತಿಭಟನೆಯಲ್ಲಿ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷ ಅಬ್ದುಲ್ ತಯ್ಯೂಬ್, ಸಲಹೆಗಾರ ನೌಷದ್ ಬೆಂಗರೆ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಹನೀಫ್ ಬೆಂಗರೆ, ಮೀನುಗಾರ ಮುಖಂಡರಾದ ಅನ್ವರ್ ಬೆಂಗರೆ ಮತ್ತಿತರರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments