Webdunia - Bharat's app for daily news and videos

Install App

ವಿಮಾನ ಕಾರ್ಯಾಚರಣೆ: ಬಿಸಿಲೂರಿಗೆ ಆಗಮಿಸಿದ ಬಿಸಿಎಎಸ್ ಭದ್ರತಾ ಸಮಿತಿ

Webdunia
ಶನಿವಾರ, 10 ನವೆಂಬರ್ 2018 (14:02 IST)
ನೂತನ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಆರಂಭಿಸುವ ಸಂಬಂಧ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ನಾಗರಿಕ ವಿಮಾನಯಾನ ಸಚಿವಾಲಯದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೋಸೈಟಿಯ ಹೈದ್ರಾಬಾದಿನ ಪ್ರಾದೇಶಿಕ ನಿರ್ದೇಶಕ ಎಂ.ಟಿ.ಬೇಗ್ ಅವರ ನೇತೃತ್ವದ ಭದ್ರತಾ ಸಮಿತಿ ಕಲಬುರಗಿಗೆ ಆಗಮಿಸಿದೆ.

ಜಿಲ್ಲಾಧಿಕಾರಿ ವೆಂಕಟೇಶ ಕುಮಾರ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಸಮಿತಿ ಸದಸ್ಯರು, ಭದ್ರತೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೋಸೈಟಿಯ ಹೈದ್ರಾಬಾದಿನ ಪ್ರಾದೇಶಿಕ ನಿರ್ದೇಶಕ ಎಂ.ಟಿ.ಬೇಗ್,  ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭದ್ರತಾ ಸಮಿತಿಯಿಂದ ನಿರಾಕ್ಷೇಪಣಾ ಪತ್ರ ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ಸಲ್ಲಿಸಿದ ನಂತರವೆ ವಾಣಿಜ್ಯ ಕಾರ್ಯಾಚರಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ದಳ, ಶ್ವಾನ ದಳ, ಅಗ್ನಿಶಾಮಕ ದಳ, ಸ್ಫೋಟಕ ವಸ್ತುಗಳ ಪತ್ತೆ ಘಟಕ, ವಿಮಾನ ನಿಲ್ದಾಣದ ಸಮಗ್ರ ಭದ್ರತೆ ಸೇರಿದಂತೆ ಡಿ.ಜಿ.ಸಿ.ಎ. ಚೆಕ್‍ಲಿಸ್ಟ್‍ನಲ್ಲಿ ನಿಗದಿಪಡಿಸಿರುವ ಇನ್ನೀತರ ಎಲ್ಲಾ ಅಗತ್ಯ ಭದ್ರತಾ ಕ್ರಮಗಳು ಕೈಗೊಳ್ಳಲೆಬೇಕು. ವಿಮಾನ ನಿಲ್ದಾಣಕ್ಕೆ ಭದ್ರತೆ ಕಲ್ಪಿಸುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿರುತ್ತದೆ ಎಂದರು.  ನಂತರ ಸಮಿತಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments