ಚಾಮರಾಜನಗರದಲ್ಲಿ ಕಾಡಾನೆ ಸೆರೆ

Webdunia
ಬುಧವಾರ, 11 ಜನವರಿ 2023 (17:53 IST)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ G.S ಬೆಟ್ಟ ವಲಯದ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ, ಭೀಮ ಸಹಾಯದಿಂದ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು. ಕಡೈಕೋಟೆ ಎಂಬಲ್ಲಿ ಸೆರೆ ಹಿಡಿಯಲಾಗಿದೆ.  ಬೆಳೆ ಹಾನಿ ಮಾಡುತ್ತಿದ್ದ ಕಾಡಾನೆಯನ್ನ ಸೆರೆ ಹಿಡಿಯುವಂತೆ ಅನೇಕ ಬಾರಿ ಒತ್ತಾಯ ಮಾಡಲಾಗಿತ್ತು. ಇದೀಗ ಆನೆಯನ್ನ ಸೆರೆ ಹಿಡಿದು, ಐನೋರ್ ಮಾರಿಗುಡಿ ಸಾಕಾನೆಗಳ ಶಿಬಿರಕ್ಕೆ ರವಾನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳಿಂದ ಅನೇಕ ರೈತರು ಜೀವ ಕಳೆದುಕೊಂಡಿದ್ದರು. ಇತ್ತೀಚೆಗಷ್ಟೇ ಹೊಲದಲ್ಲಿರುವ ಸಮಯದಲ್ಲಿ ಅಂಧ ವ್ಯಕ್ತಿಯ ಮೇಲೆ ಕಾಡಾನೆಗಳು ದಾಳಿ ಮಾಡಿತ್ತು. ನಂತರ ಗುಂಡ್ಲುಪೇಟೆ ತಾಲೂಕಿನ ಬೆಟ್ಟ ಮಾದಹಳ್ಳಿ ಗ್ರಾಮದ ರೈತನ ಮೇಲೆ ಏಕಾಏಕಿ ಆನೆಗಳು ದಾಳಿ ಮಾಡಿ, ಬೈಕ್​ನ್ನು ಜಖಂಗೊಳಿಸಿದ್ದವು. ಇದೀಗ ಆನೆಯನ್ನ ಸೆರೆ ಹಿಡಿದಿದ್ದು, ರೈತರು ನಿಟ್ಟುಸಿರು ಬೀಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments