Webdunia - Bharat's app for daily news and videos

Install App

ರಾಜ್ಯದ ಜನತೆಯಲ್ಲಿ ವಿಶೇಷ ಮನವಿ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ

Webdunia
ಶನಿವಾರ, 28 ಆಗಸ್ಟ್ 2021 (11:46 IST)
ಶಿವಮೊಗ್ಗ, (ಆ.28): ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಈ ಬಾರಿಯೂ ಗೌರಿ ಗಣೇಶ ಹಬ್ಬವನ್ನು ಸರಳವಾಗಿ ಆಚರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ವೈಭವದಿಂದ ಗಣೇಶೋತ್ಸವ ಆಚರಣೆ ಸರಿಯಲ್ಲ. ಈ ಬಗ್ಗೆ ನಮ್ಮ ಸರ್ಕಾರ ಚರ್ಚೆ ನಡೆಸಿ ಸೂಕ್ತ ತೀರ್ಮಾನ  ಕೈಗೊಳ್ಳಲಿದೆ ಎಂದರು.
ರಾಜ್ಯ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇದ್ದು, ಗೌರಿ ಗಣೇಶ ಹಬ್ಬದ ನಂತರ ಪಕ್ಷ ಸಂಘಟನೆಗಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಜಿಲ್ಲಾ ಪ್ರವಾಸದ ನಂತರ ವಿಧಾನಸಭಾ ಕ್ಷೇತ್ರವಾರು ಪ್ರವಾಸ ನಡೆಸಿ, ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ನಡೆಸುವುದಾಗಿ ತಿಳಿಸಿದರು.
 135-140 ಸ್ಥಾನ ಬಂದರೆ ನನ್ನ ಹೋರಾಟ ಸಾರ್ಥಕ ಆಗುತ್ತದೆ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಕೇವಲ ಶಿವಮೊಗ್ಗ ಜಿಲ್ಲೆಗೆ ಮಾತ್ರ ಕೆಲಸ ಮಾಡಿದ್ದೇನೆ ಎಂದು ಭಾವಿಸುವುದು ಬೇಡ. ಎಲ್ಲ ಜಿಲ್ಲೆಗಳಿಗೂ, ಸಮುದಾಯದ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿದ್ದೇನೆ. ಜನರ ಕೆಲಸ ಮಾಡಲು ಅಧಿಕಾರ ಮುಖ್ಯ ಅಲ್ಲ, ಅಧಿಕಾರ ಇರದಿದ್ದರೂ ಕೆಲಸ ಮಾಡುತ್ತಿದ್ದೇನೆ. ಜನರ ಸೇವೆಗಾಗಿ ನಮ್ಮ ಮನೆಯ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments