Webdunia - Bharat's app for daily news and videos

Install App

ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

Webdunia
ಮಂಗಳವಾರ, 25 ಏಪ್ರಿಲ್ 2023 (09:29 IST)
ಬೆಳಗಾವಿ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.
 
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. 

ಇನಾಮ್ದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments