Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

Webdunia
ಭಾನುವಾರ, 7 ನವೆಂಬರ್ 2021 (19:56 IST)
ಬೆಂಗಳೂರು: ನನಗೆ  ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ. ಈ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪತ್ರದ ಮುಖೇನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.
ಈ ವಿಚಾರವನ್ನು ಅವರು ನ. 6 ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 
ನಾನು ಕರ್ನಾಟಕದಲ್ಲಿನ ಚಿಕ್ಕಮಗಳೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಅದು ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ನಾಲ್ಕು ಕೇಂದ್ರಗಳಲ್ಲಿ ಒಂದಾಗಿದೆ ಎಂದು ದೇವೇಗೌಡರು ಬರೆದುಕೊಂಡಿದ್ದಾರೆ.
ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ದೇವೇಗೌಡ ಶೃಂಗೇರಿ ಮಠದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments