Webdunia - Bharat's app for daily news and videos

Install App

ಒಂದೇ ಕುಟುಂಬದ ನಾಲ್ವರು ಸಜೀವ ದಹನ!

Webdunia
ಗುರುವಾರ, 21 ಫೆಬ್ರವರಿ 2019 (16:31 IST)
ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಕಟ್ಟಡಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಹಾಸನದ ಚನ್ನರಾಯಪಟ್ಟಣದ ಬಳಿ ಮುಂಜಾನೆ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಬಾಣವಾರದ ವಿವೇಕ್ ನಾಯಕ್, ಅವರ ಪತ್ನಿ ರೇಷ್ಮಾ ನಾಯಕ್, ಪುತ್ರಿ ವಿನಂತಿ ನಾಯಕ್ (9), ಮತ್ತೊಬ್ಬ ಮಗ ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ವಿವೇಕ್ ನಾಯಕ್, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕರೆದುಕೊಂಡು ಮಂಗಳೂರಿನಿಂದ ಬೆಂಗಳೂರಿಗೆ ಮುಂಜಾನೆ 5 ವೇಳೆ ಕಾರಿನಲ್ಲಿ ಬರುತ್ತಿದ್ದರು. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸುತ್ತಿದ್ದ ವಿವೇಕ್ ನಾಯಕ್, ಚನ್ನರಾಯಪಟ್ಟಣದ ಉದಯಪುರ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ಪಕ್ಕದ ಶೌಚಾಲಯ ಕಟ್ಟಡದ ಗೋಡೆಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಡೀಸೆಲ್ ಟ್ಯಾಂಕ್  ಒಡೆದು ಬೆಂಕಿ ಹತ್ತಿಕೊಂಡು ಕಾರಿನಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ. ಸ್ಥಳೀಯರು ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಇಡೀ ಕಾರು ಸುಟ್ಟು ಹೋಗಿದ್ದು, ಅದರಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments