ಬಿಟ್‌ಕಾಯಿನ್‌ ಹೂಡಿಕೆಗೆ ಹೋಗಿ ಮೂರುವರೆ ಕೋಟಿ ಉಂಡೆ ನಾಮ ಹಾಕಿಸಿಕೊಂಡ ನಗರದ ಉದ್ಯಮಿ: ಸೈಬರ್ ಠಾಣೆಯಲ್ಲಿ ದೂರು ದಾಖಲು

Webdunia
ಭಾನುವಾರ, 4 ಜುಲೈ 2021 (14:17 IST)
ಬೆಂಗಳೂರು: ಜಗತ್ತಿನಾದ್ಯಂತ ಬಿಟ್‌ಕಾಯಿನ್‌ ಹೂಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹೀಗೆಯೇ ರಾಜಧಾನಿಯ ಜೆಪಿ ನಗರದ ಉದ್ಯಮಿಯೊಬ್ಬರು ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ ವಂಚಕನನ್ನು ನಂಬಿ ಮೂರುವರೆ ಕೋಟಿ ರೂಪಾಯಿ ಉಂಡೆ ನಾಮ ಹಾಕಿಸಿಕೊಂಡಿದ್ದಾರೆ.
 
ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ ಹೂಡಿಕೆ ಮಾಡಲು ಸಹಾಯಮಾಡುವುದಾಗಿ ಭರವಸೆ ನೀಡಿ ಖದೀಮ ವಂಚಿಸಿದ್ದಾನೆ ಎಂದು ದೂರು ನೀಡಲಾಗಿದೆ.
 
ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದ ಸ್ನೇಹಿತ ರಮೇಶ್ ಲಾಭ ಗಳಿಸಿದ್ದರು ಎಂದು ಉದ್ಯಮಿ ಗೌತಮ್ ತಿಳಿಸಿದ್ದಾರೆ. ಈ ವ್ಯವಹಾರದ ಬಗ್ಗೆ ತಮಗೆ ಸಾಕಷ್ಟು ತಿಳಿವಳಿಕೆ ಇಲ್ಲ ಆದರೆ ಸ್ನೇಹಿತ ಕುನಾಲ್ ಎಂಬಾತನ ಮೂಲಕ ಹೂಡಿಕೆ ಮಾಡಿದ್ದು ಎಂದು ರಮೇಶ್ ಹೇಳಿದ್ದರು.
 
ರಮೇಶ್ ಸಂಪರ್ಕದಿಂದ ಕುನಾಲ್ ಭೇಟಿ ಮಾಡಿದ ಗೌತಮ್, ಸಲಹೆಯಂತೆ ಕಳೆದ ಮೇ 15ರಂದು ಕ್ರಿಪ್ಟೋಕರೆನ್ಸಿಗಳನ್ನು ಖರೀದಿಸಲು ಎರಡು ಬ್ಯಾಂಕ್ ಖಾತೆಗಳಿಗೆ ಒಟ್ಟು 3.5 ಕೋಟಿ ರೂ ವರ್ಗಾವಣೆ ಮಾಡಿದ್ದಾರೆ ಆದರೆ ಕ್ರಿಪ್ಟೋಕರೆನ್ಸಿ ವ್ಯವಸ್ಥೆ ಮಾಡಲಿಲ್ಲ. ತನಗೆ ನೀಡಿದ್ದ ಹಣವನ್ನೂ ವಾಪಸ್ ನೀಡಲಿಲ್ಲ. ಸಂಪರ್ಕಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ.  ಕಂಗಾಲಾದ ಗೌತಮ್ ದಕ್ಷಿಣ ವಿಭಾಗದ ಸಿ.ಇ.ಎನ್ ಅಪರಾಧ ಪೊಲೀಸರಿಗೆ ದೂರು ದಾಖಲಾಗಿದ್ದು ಮುಂದಿನ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲಿ ಪಾಠ ಕೇಳುವಾಗಲೇ ಕಾಲೇಜಿನ ಮೇಲ್ಛಾವಣಿ ಕುಸಿತ: ಪ್ರಿಯಾಂಕ್ ಖರ್ಗೆ ಇದಕ್ಕೆ ಹೊಣೆ ಎಂದ ಬಿಜೆಪಿ

ಡೀಸೆಲ್ ಖರೀದಿಗೆ ಮಿತಿ ಹೇರಿದ ಕೇಂದ್ರ ಸರ್ಕಾರ: ದಿನಕ್ಕೆ ಇಷ್ಟೇ ಡೀಸೆಲ್ ಖರೀದಿಸಲು ಅವಕಾಶ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ದಾಳಿಗೆ ತುತ್ತಾದ ಭಾರತೀಯ ಸಿಬ್ಬಂದಿ ಇದ್ದ ಹಡಗು; ಕೆಲವೇ ದಿನಗಳಲ್ಲಿ ನಡೆದ 4ನೇ ದಾಳಿ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

Video, ಸಿಎಂ ಆದ್ರೂ ಸಿಂಪ್ಲಿಸಿಟಿ ಮರೆಯದ ಜೋಸೆಫ್ ವಿಜಯ್, ಇಂದು ಕೊಲ್ಲೂರಿನಿಂದ ವಾಪಾಸ್‌ ಆಗುವಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments