ಸಂತ್ರಸ್ತರಿಗೆ ಉಚಿತ ಶಿಕ್ಷಣ ಮುಂದಾದ ಮುಖಂಡ

Webdunia
ಮಂಗಳವಾರ, 28 ಆಗಸ್ಟ್ 2018 (13:38 IST)
ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ರಾಜ್ಯದ ವಿವಿಧೆಡೆ ದಾನಿಗಳು ಮುಂದಾಗಿದ್ದಾರೆ. ಏತನ್ಮಧ್ಯೆ ಸಂತ್ರಸ್ತರ ಕುಟಂಬಗಳ ಮಕ್ಕಳಿಗೆ ಮಾಜಿ ಸಚಿವರೊಬ್ಬರು ಉಚಿತ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಮಾಜಿ ಸಚಿವ ಹಾಗೂ ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಚೆನ್ನಿಗಪ್ಪಾ, ಕೊಡಗು ನೆರೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಮುಂದಾಗಿದ್ದಾರೆ. ತಮ್ಮ ಒಡೆತನದ ವಿದ್ಯಾಸಂಸ್ಥೆಯಲ್ಲಿ ಸಂತ್ರಸ್ತರ ಕುಟುಂಬದ 100 ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ನೀಡುವುದಾಗಿ ಘೋಷಿಸಿದ್ದಾರೆ. 

ನೆಲಮಂಗಲ ಬಳಿ ಇರುವ ಶಿವಕುಮಾರ ಮಹಾಸ್ವಾಮೀಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಎಂಜಿನಿಯರಿಂಗ್  30, ಎಂಟೆಕ್  20, ಪಾಲಿಟೆಕ್ನಿಕ್  50 ಸೀಟ್ ಒಟ್ಟು 100 ಮಕ್ಕಳಿಗೆ ವಸತಿ ಶಿಕ್ಷಣ ನೀಡಲು ಮುಂದಾಗಿದ್ದಾರೆ.

ಈ ಮೂಲಕ ಕೊಡಗು ಸಂತ್ರಸ್ತ ಕುಟುಂಬದ ಮಕ್ಕಳಿಗೆ ಶೈಕ್ಷಣಿಕವಾಗಿ‌ ನೆರವಾಗಲು ಮುಂದಾಗಿದ್ದಾರೆ. ಶಿವಕುಮಾರಸ್ವಾಮಿಗಳ ಆಶೀರ್ವಾದ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾರ್ಗರ್ಶನ ದಿಂದ ನಡೆದು ಬಂದಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಮಾಡುತ್ತಿರುವ ಜನಸೇವೆಗೆ ನಾನು ಸಹಕಾರ  ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ಚೆನ್ನಿಗಪ್ಪಾ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments