Webdunia - Bharat's app for daily news and videos

Install App

ನಮಗೆ ನ್ಯಾಯ ಸಿಗಬೇಕು, ಗೌರಿ ಹಂತಕರನ್ನ ಬಂಧಿಸಬೇಕು: ಇಂದ್ರಜಿತ್, ಕವಿತಾ ಲಂಕೇಶ್

Webdunia
ಗುರುವಾರ, 7 ಸೆಪ್ಟಂಬರ್ 2017 (13:53 IST)
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗಳ ಬಗ್ಗೆ ಉಂಟಾಗಿರುವ ಗೊಂದಲ ನಿವಾರಣೆಗೆ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಮತ್ತು ಕವಿತಾ ಲಂಕೆಶ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಅಕ್ಕನಿಗೆ ಸೈದ್ಧಾಂತಿಕ ಶತ್ರುಗಳಿದ್ದರೆ ಹೊರತು ವೈಯಕ್ತಿಕ ಶತ್ರುಗಳಿರಲಿಲ್ಲ. ಸೈದ್ಧಾಂತಿಕ ಶತ್ರುಗಳಿಂದಲೇ ಹತ್ಯೆಯಾಗಿರಬಹುದೆಂದು ಎಂದು ಹೇಳಿದ್ಧಾರೆ.

ನಮ್ಮ ಅಕ್ಕನನ್ನ ಕೊಂದವರನ್ನ ಬಂಧಿಸಬೇಕು ನಮಗೆ ನ್ಯಾಯ ಸಿಗಬೇಕು. ಎಸ್ಐಟಿ ತನಿಖೆ ಆರಂಭಿಸಿದ್ದಾರೆ. ತನಿಖೆ ನಡೆಯಲಿ. ಅದಕ್ಕೆ ಸಮಯ ಕೊಡೋಣ. ನ್ಯಾಯ ಸಿಗದಿದ್ದರೆ ಮಾತ್ರ ಸಿಬಿಐ ತನಿಖೆ ಬಗ್ಗೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಈ ಕೊಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಮನವಿ ಮಾಡಿದ್ದಾರೆ.

ಗೌರಿ ಕುಟುಂಬ ಒತ್ತಾಯಿಸಿದರೆ ಸಿಬಿಐ ತನಿಖೆಗೆ ವಹಿಸಲು ಸಿದ್ಧವೆಂದು ಹೇಳಿರುವ ಸಿಎಂ ಸಿದ್ದರಾಮಯ್ಯನವರನ್ನ ಅಭಿನಂದಿಸಿದ ಇಂದ್ರಜಿತ್ ಲಂಕೇಶ್, ನಮ್ಮ ಅಕ್ಕ ಸಿದ್ದರಾಮಯ್ಯನವರ ಜೊತೆ ಮಗಳ ರೀತಿ ಇದ್ದರು. ನಕ್ಸಲರನ್ನ ಮುಖ್ಯವಾಹಿನಿಗೆ ತರುವಲ್ಲಿ ಸರ್ಕಾರಕ್ಕೆ ನೆರವು ನೀಡಿದ್ದಾರೆ. ಗೌರಿಗೆ ನ್ಯಾಯ ಒದಗಿಸಬೇಕೆಂದು ಸಿಎಂ ಸಿದ್ದರಾಮಯ್ಯನವರಿಗಿದೆ ಎಂದು ಇಂದ್ರಜಿತ್ ಹೇಳಿದರು.

 ಇದೇವೇಳೆ, ಮನೆ ಮುಂದೆ ಕೆಲವರು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಗೌರಿ ಲಂಕೇಶ್ ತಾಯಿ ಜೊತೆ ಹೇಳಿಕೊಂಡಿದ್ದರು ಎಂದು ಕವಿತಾ ಲಂಕೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments