ಗಿರೀಶ್ ಕಾರ್ನಾಡ್ ಇನ್ನಿಲ್ಲ

Webdunia
ಸೋಮವಾರ, 10 ಜೂನ್ 2019 (10:53 IST)
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾಗಿದ್ದಾರೆ.



ಇವರಿಗೆ 81 ವರ್ಷ ವಯಸ್ಸಾಗಿದ್ದು, ಕಳೆದ 1 ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

 

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾದ ಗಿರೀಶ್ ಕಾರ್ನಾಡ್ ಅವರು 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಜನಿಸಿದ್ದಾರೆ. ಸಾಹಿತಿ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡ ಅವರು ಅನೇಕ ಕನ್ನಡ, ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು. 'ಸಂಸ್ಕಾರ', 'ನಾಗಮಂಡಲ', 'ತಬ್ಬಲಿಯು ನೀನಾದೆ ಮಗನೆ', 'ಒಂದಾನೊಂದು ಕಾಲದಲ್ಲಿ', 'ಚೆಲುವಿ', 'ಕಾನೂರು ಹೆಗ್ಗಡತಿ' ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರಗಳಾದ 'ನಿಶಾಂತ್', 'ಮಂಥನ್', 'ಪುಕಾರ್', ಇತ್ತೀಚಿನ 'ಏಕ್ ಥಾ ಟೈಗರ್', 'ಟೈಗರ್ ಜಿಂದಾ ಹೈ' ಮುಂತಾದ ಚಿತ್ರಗಳಲ್ಲಿ ತನ್ನ ಪ್ರಭುದ್ದ ನಟನೆಯಿಂದ ಮನೆಮಾತಾಗಿದ್ದರು.

 

ಗಿರೀಶ್ ಕಾರ್ನಾಡರು ತಮ್ಮ ಸಾಹಿತ್ಯ ಕೃಷಿ ಮತ್ತು ಚಲನ ಚಿತ್ರಗಳಿಗಾಗಿ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಚಿತ್ರ ನಟನೆ ಮತ್ತು ನಿರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ, ಫಿಲಂ ಫೇರ್ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರೆ.

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಮುಂದಿನ ಸುದ್ದಿ
Show comments