Publish Date: Thu, 27 Apr 2023 (20:50 IST)
Updated Date: Thu, 27 Apr 2023 (20:12 IST)
ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಹಲವಾರು ಕಾರ್ಯಕರ್ತರು ನಟ ಸುದೀಪ್ಗೆ ಅದ್ಧೂರಿ ಸ್ವಾಗತ ಕೋರಿದ್ದು, ಹಾವೇರಿ ನಗರದ ಪ್ರಮುಖ ಭಾಗಗಳಲ್ಲಿ ಕಿಚ್ಚ ಅಬ್ಬರದ ಪ್ರಚಾರ ನಡೆಸಿದರು. ಕೊವಿಡ್ ಸಮಯದಲ್ಲಿಯೂ ಸರ್ಕಾರ ಒಳ್ಳೆ ಕೆಲಸ ಮಾಡಿದೆ. ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಿ ಎಂದರು.