Webdunia - Bharat's app for daily news and videos

Install App

ಮಂಗಳೂರು-ಬೆಂಗಳೂರು ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೊಸ ರೈಲಿನ ವೇಳಾಪಟ್ಟಿಇಲ್ಲಿದೆ

Krishnaveni K
ಶುಕ್ರವಾರ, 2 ಆಗಸ್ಟ್ 2024 (12:10 IST)
ಮಂಗಳೂರು: ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಮಂಗಳೂರು-ಬೆಂಗಳೂರು ರೈಲ್ವೇ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಜನರ ಬಹುದಿನಗಳ ಬೇಡಿಕೆ ಈಡೇರಿಸಿದೆ. ಹೊಸ ರೈಲಿನ ವೇಳಾಪಟ್ಟಿ ವಿವರ ಇಲ್ಲಿದೆ.

ಮಂಗಳೂರು ಜಂಕ್ಷನ್ ನಿಂದ ಯಶವಂತಪುರಕ್ಕೆ ವಾರಕ್ಕೆ ಮೂರು ಬಾರಿ ಸಂಚರಿಸುವ ರೈಲಿನ ಸಮಯ ಬದಲಾವಣೆ ಮಾಡುವಂತೆ ಬಹಳ ದಿನಗಳಿಂದ ಸಾರ್ವಜನಿಕರು ಒತ್ತಾಯ ಮಾಡುತ್ತಲೇ ಇದ್ದರು. ಈಗ ಇರುವ ವೇಳಾಪಟ್ಟಿ ಜನರಿಗೆ ಅನುಕೂಲವಾಗುತ್ತಿಲ್ಲ ಎಂಬುದು ಆಕ್ಷೇಪಕ್ಕೆ ಕಾರಣವಾಗಿತ್ತು.

ಆದರೆ ಈಗ ಕೊನೆಗೂ ರೈಲ್ವೇ ಇಲಾಖೆ ಜನರ ಒತ್ತಡಕ್ಕೆ ಮಣಿದು ಸಮಯ ಬದಲಾವಣೆ ಮಾಡಿದೆ. ಇನ್ನು ಮುಂದೆ ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30 ಕ್ಕೆ  ಬೆಂಗಳೂರಿನ ಯಶವಂತಪುರಕ್ಕೆ ತಲುಪಲಿದೆ. ಈ ಬಗ್ಗೆ ಸ್ವತಃ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪ್ರಕಟಣೆ ನೀಡಿದ್ದಾರೆ.

ಸದ್ಯಕ್ಕೆ ಭಾರೀ ಮಳೆಯಿಂದ ಗುಡ್ಡ ಕುಸಿತವಾಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲ್ವೇ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಡಕುಮೇರಿ ಬಳಿ ಗುಡ್ಡ ಕುಸಿತವಾಗಿದ್ದು, ರೈಲ್ವೇ ಮಾರ್ಗ ದುರಸ್ಥಿ ಬಳಿಕ ಸಂಚಾರ ಪುನರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments