Webdunia - Bharat's app for daily news and videos

Install App

ಪೌರಕಾರ್ಮಿಕರ ಸಮಸವಸ್ತ್ರಕ್ಕೆ ಮೀಸಲಿಟ್ಟಿದ್ದ 15 ಕೋಟಿಗೆ ಕೊಕ್ ಕೊಟ್ಟ ಸರ್ಕಾರ

Webdunia
ಭಾನುವಾರ, 22 ಅಕ್ಟೋಬರ್ 2023 (15:46 IST)
ಅನುದಾನ ಕಡಿತಕ್ಕೆ ಸಿಎಂ ಸಿದ್ದುಗೆ ಬಿಬಿಎಂಪಿ ಪೌರಕಾರ್ಮಿಕರ ಸಂಘ ಪತ್ರ ಬರೆದಿದೆ.ಗ್ಯಾರಂಟಿಗಳನ್ನು ಕೊಟ್ಟಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಅನುದಾನ ಹೊಂದಿಸಲು ಸಾಧ್ಯವೋ ಅನುದಾನಕ್ಕೆ ಕತ್ತರಿ ಹಾಕ್ತಿದೆ.ಈಗ ಪೌರಕಾರ್ಮಿಕರಿಗೆ ಮೀಸಲಿಟ್ಟದ 15 ಕೋಟಿ ರೂಪಾಯಿಗೂ ಬ್ರೇಕ್ ಹಾಕಿದೆ
 
ಸರ್ಕಾರದ ವಿರುದ್ಧ ಬಿಬಿಎಂಪಿ ಪೌರ ಕಾರ್ಮಿಕರ ಸಂಘ ಸಿಎಂಗೆ ಪತ್ರ ಬರೆದು ಆಕ್ರೋಶ ಹೊರಹಾಕಿದೆ.ಬಿಬಿಎಂಪಿ ಪೌರಕಾರ್ಮಿಕರಿಗೆ ಸಮಸವಸ್ತ್ರ, ವೃತ್ತಿ ಉಪಕರಣಗಳು..  ಇತರೆ ಖರ್ಚು ವೆಚ್ಚಕ್ಕೆಂದು 15 ಕೋಟಿ ರೂಪಾಯಿ ಮೀಸಲಿಡಲಾಗುತ್ತೆ. ಈ ಅನುದಾನದಲ್ಲಿ ಪೌರಕಾರ್ಮಿಕರಿಗೆ ಸಮಸವಸ್ತ್ರವನ್ನೆಲ್ಲಾ ಪಾಲಿಕೆ‌  ಸರಿದೂಗಿಸುತ್ತಿತ್ತು.

ಅಲ್ಲದೆ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿಗೂ ಇದೇ ಹಣ ವ್ಯಯಮಾಡ್ತಿತ್ತು.ಆದರೀಗ ಏಕಾಏಕಿ  ಮೀಸಲಿಟ್ಟ ಹಣವನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ.ಸರ್ಕಾರದ ನಡೆಗೆ ಬಿಬಿಎಂಪಿ ಪೌರ ಕಾರ್ಮಿಕರ ಸಂಘ ತೀವ್ರ ಅಸಮಾಧಾನ ಹೊರಹಾಕಿದೆ.ಹಲವು ವರ್ಷಗಳಿಂದ ಖಾಯಂ ನೇಮಕಾತಿಗೆ ಪೌರಕಾರ್ಮಿಕರು ಹೋರಾಡುತ್ತಿದ್ದು,ನಮ್ಮ ನೋವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು.ಸಮವಸ್ತ್ರ ಹಾಗೂ ಇತರೆ ಉಪಕರಣಗಳ ಖರೀದಿಗೆ ಮೀಸಲಿಟ್ಟಿರುವ ಹಣವನ್ನು ವಾಪಾಸ್ ಕೊಡಬೇಕು.15 ಕೋಟಿಯಲ್ಲಿ ಒಟ್ಟು 18,500 ಪೌರ ಕಾರ್ಮಿಕರಿಗೆ ಅನುಕೂಲ ಒದಗಿಸಲಾಗುತ್ತಿತ್ತು.ಈ ವರ್ಷದಿಂದ ಅದೂ ಕೂಡ ಕಾರ್ಮಿಕರ ಕೈ ತಪ್ಪಲಿದೆ ಎಂದು ಬಿಬಿಎಂಪಿ ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಅಂಜನೇಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments