Webdunia - Bharat's app for daily news and videos

Install App

ಮುಕ್ತ ತನಿಖೆಗೆ ಸರ್ಕಾರ ಬದ್ಧವಾಗಿದೆ-ಸಿಎಂ ಬಸವರಾಜ್​​​ ಬೊಮ್ಮಾಯಿ

Webdunia
ಶನಿವಾರ, 26 ನವೆಂಬರ್ 2022 (16:10 IST)
ರಾಜ್ಯದಲ್ಲೂ ಏಕರೂಪ ನಾಗರೀಕ ಸಂಹಿತೆ ಜಾರಿ ವಿಚಾರ ಕುರಿತು ಸಿಎಂ ಬಸವರಾಜ್​​​ ಬೊಮ್ಮಾಯಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರೀಕ ಸಂಹಿತೆ ಜಾರಿ ಬಗ್ಗೆ ನಾವೂ ಸಹ ಗಂಭೀರವಾಗಿ ಚಿಂತನೆ ಮಾಡ್ತಿದ್ದೇವೆ. ಏಕರೂಪ ನಾಗರೀಕ ಸಂಹಿತೆ ಜಾರಿ ಬಗ್ಗೆ ಕೇಂದ್ರದ ಬಿಜೆಪಿಯ ಪ್ರಣಾಳಿಕೆಯಲ್ಲೂ ಪ್ರಸ್ತಾಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಇದರ ಜಾರಿ ಬಗ್ಗೆ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ರು. ಚಿಲುಮೆ ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿದ್ದರ ಕುರಿತು ಮಾತನಾಡಿದ ಅವರು, ಇಬ್ಬರು IAS ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ವಹಿಸಿದ್ದೇವೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ರು. ಕರ್ನಾಟಕದ ಬಸ್​​​ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಈಗಾಗಲೇ‌ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡಿದ್ದೀನಿ. ಇವತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಅಲ್ಲಿನವರ ಜತೆ ಮಾತಾಡ್ತಾರೆ. ನಮ್ಮ ಬಸ್ ಗಳಿಗೆ ಯಾವುದೇ ಹಾನಿ ಮಾಡಬಾರದು ಅಂತಲೂ ತಿಳಿಸಿದ್ದೀವಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments