Webdunia - Bharat's app for daily news and videos

Install App

ಕೋವಿಡ್ ಹಗರಣದ ತನಿಖೆ ನಡೆಸಲು ಎಸ್‌ಐಟಿ ರಚನೆಗೆ ಸರ್ಕಾರ ಅಸ್ತು

Sampriya
ಗುರುವಾರ, 14 ನವೆಂಬರ್ 2024 (17:02 IST)
Photo Courtesy X
ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಯನ್ನು ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಇಂದು ಸಿಎಂ ಸಿದ್ದರಾಮಯ್ಯ  ನೇತೃ‌ತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಮಾತನಾಡಿ, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು.  ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ ಎಂದು ಆರೋಪಗಳು ಕೇಳಿಬಂದಿದೆ. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ ಎಫ್‌ಐಆರ್‌ ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧಎಫ್‌ಐಆರ್ ದಾಖಲಿಸಬೇಕೆಂದು ಎಸ್‌ಐಟಿ ನಿರ್ಧರಿಸುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments