ಸೋಮವಾರದಿಂದ ಅಗತ್ಯ ವಸ್ತುಗಳ ಮೇಲೆ ಜಿ ಎಸ್ ಟಿ ಜಾರಿ

Webdunia
ಭಾನುವಾರ, 17 ಜುಲೈ 2022 (16:07 IST)
ಸೋಮವಾರದಿಂದ ದಿನಬಳಕೆಯ ವಿವಿಧ ವಸ್ತಗಳ ಮತ್ತು ಹಲವು ಸೇವೆಗಳ ಮೇಲೆ ಜಿ ಎಸ್ ಟಿ  ತೆರಿಗೆ ವಿಧಿಸಲು  ಜಿ ಎಸ್ ಟಿ ಮಂಡಳಿ ನಿರ್ಧಾರ ಮಾಡಿದೆ. ಆಹಾರ ಪದಾರ್ಥಗಳಿಂದ ಹಿಡಿದು ಉಡುಪಿನ ಮೇಲೂ ಜಿ ಎಸ್ ಟಿ ವಿಧಿಸಲಾಗ್ತದೆ. ಇನ್ನು ನಾಳೆಯಿಂದ ಜಿ ಎಸ್ ಟಿ ದರ ಜಾರಿಯಾಗಲಿದೆ.ಹೀಗಾಗಿ  ಜನಸಾಮಾನ್ಯರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಮಂಡಲರಾಗಿದ್ದಾರೆ.

ಯಾವ ಯಾವ ವಸ್ತು ಬೆಲೆ ದುಬಾರಿ ಅಂತಾ ನೋಡುವುದಾದ್ರೆ
 
- ಪ್ಯಾಕ್ ಮಾಡಿದ ಮೀನು, ಮಾಂಸ, ಮೊಸರು,  ಜೇನುತುಪ್ಪ, ಬೆಲ್ಲ, ಒಣಗಿಸಿದ ತರಕಾರಿ, ಗೋಧಿ, ಇತರೆ ಧಾನ್ಯ ಗಳು, ಮಂಡಕ್ಕಿ, ಸಾವಯವ ಗೊಬ್ಬರ,
 
- ಪ್ಯಾಕ್ ಮಾಡಿದ ಬ್ರಾಂಡೆಡ್ ಭೂಪಟ, ಚಾರ್ಟ್ , ಅಟ್ಲಾಸ್ , ಸೋಲಾರ್  ವಾಟರ್ ಹೀಟರ್, ಮುದ್ರಣ, ಬರ ಚಿತ್ರಕಲೆಯ ಇಂಕ್, ಎಲ್ ಇಡಿ ಬಲ್ಡ್ ಎಲ್ ಐಡಿ ಲ್ಯಾಪ್
 
- ಚರ್ಮದ ಸಿದ್ಧ ಉತ್ಪನ್ನಗಳು, ಟೈಲರಿಂಗ್ , ಜವಳಿ ಸೇವೆಗಳು, ಅಂಚೆ ಇಲಾಖೆ, ಬುಕ್ ಪೋಸ್ಟ್, 10 ಗ್ರಾಂಗಿಂತ ಕಡಿಮೆ ಇರುವ ಲಕೋಟೆ,ಚೆಕ್ ಬುಕ್
 
- ನಿತ್ಯದ ಬಾಡಿಗೆ 1000 ರೂ ಗಿಂತ ಕಡಿಮೆ ಇರುವ ಹೋಟೆಲ್ ಕೊಠಡಿಗಳಿಗೂ ಇನ್ನು ಶೇ.12ರಷ್ಟು ತೆರಿಗೆ ಜಾರಿ
 
- ದಿನಕ್ಕೆ 5000 ರು.ಗಿಂತ ಹೆಚ್ಚಿನ ಬಾಡಿಗೆ ವಿಧಿಸುವ ಸಾರ್ವಜನಿಕ ಧಾರ್ಮಿಕ ಕೇಂದ್ರಗಳು, ಮಾಸಿಕ 2500 ರು.ಗಿಂತ ಹೆಚ್ಚಿನ ಬಾಡಿಗೆ ಇರುವ ವಾಣಿಜ್ಯ ಮಳಿಗೆಗಳಿಗೂ ಜಿ ಎಸ್ ಟಿ ಜಾರಿ
 
-ವಸತಿ ಉದ್ದೇಶಕ್ಕಾಗಿ ಉದ್ಯಮ  ಸಂಸ್ಥೆಗಳು,  ವಸತಿ ಕಟ್ಟಡಗಳನ್ನು ಬಾಡಿಗೆಗಾಗಿ ನೀಡಿದ್ದರೆ ಅದಕ್ಕೆ ಈವರೆಗೆ ಪದ್ದ ವಿನಾಯಿತಿ ರದ್ದು
 
-ಬ್ಲಡ್‌ ಬ್ಯಾಂಕ್‌ಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯ್ತಿ ರದ್ದು 
 
 ಪ್ರತಿಯೊಂದು ವಸ್ತುವಿನ ಬೆಲೆ ದುಬಾರಿಯಾಗಿದೆ. ಇನ್ನು ಸೋಮವಾರದಿಂದ ಎಲ್ಲ ವಸ್ತುಗಳ ಬೆಲೆ ಇನ್ನಷ್ಟು ಗಗನಕ್ಕೇರಲಿದೆ. ಹೀಗಾಗಿ ಜನರು ಕಂಗಾಲಾಗಿದ್ದು, ಅಸಾಮಾಧಾನ ಹೊರಹಾಕ್ತಿದ್ದಾರೆ. ಬರುವ ಸಂಬಳ ಮಾತ್ರ ಕಡಿಮೆ . ಆದ್ರೆ ಎಲ್ಲದರ ಬೆಲೆ ನಿರಂತರವಾಗಿ ಏರಿಕೆಯಾಗ್ತಿದೆ. ಹೀಗೆ ಆದ್ರೆ ಹೇಗೆ ಜೀವನ ನಡೆಸುವುದು ಎಂದು ಜನರು ಚಿಂತಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆಕ್ರೋಶಗೊಂಡ ಜನರು ಸರ್ಕಾರದ ನಿರ್ಧಾರಕ್ಕೆ ಹಿಡಿಶಾಪ ಹಾಕ್ತಿದ್ದಾರೆ. ಸೋಮವಾರದಿಂದ ಎಲ್ಲದರ ದರ ಏರಿಕೆಯಾಗಲಿದ್ದು, ಜನರು ಏನುಮಾಡಲಾದ ಸ್ಥಿತಿ ತಲುಪಿದ್ದಾರೆ. ಇನ್ನು ಕೇಂದ್ರ ಸರ್ಕಾರದ ನಿರ್ಧಾರದಿಂದ ಶ್ರೀಸಾಮಾನ್ಯರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಲ್ ಅಂಗಡಿಯಲ್ಲಿ 10 ರೂ ಕೊಟ್ಟು ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿದ ಪ್ರಧಾನಿ ಮೋದಿ Video

ಯಶಸ್ಸಿನ ಲಾಭ ಮೋದಿಗೆ ಸಿಗುತ್ತದೆ ಎಂಬ ಭಯ ಕಾಂಗ್ರೆಸ್‍ಗೆ: ತೇಜಸ್ವಿ ಸೂರ್ಯ

ರಾಹುಲ್ ಗಾಂಧಿ ಭಾಷಣ ಮಾಡಿದ್ದೇನೋ, ಟ್ರಾನ್ಸ್ ಲೇಟರ್ ಹೇಳ್ತಿರೋದು ಇನ್ನೇನೋ: Video

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ಬಿಜೆಪಿ ರಾಜಕೀಯ ಸರ್ಜಿಕಲ್ ಸ್ಟ್ರೈಕ್‌ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಸಂದರ್ಶಕರ ಮೇಲೆ ಕಲ್ಲೆಸೆಯಲು ಮುಂದಾದ ಮರಿ ಚಿಂಪಾಂಜಿ, ತಾಯಿ ಚಿಂಪಾಂಜಿ ಏನ್ ಮಾಡ್ತು ನೋಡಿ, Video

ಮುಂದಿನ ಸುದ್ದಿ
Show comments