Webdunia - Bharat's app for daily news and videos

Install App

*ಚುನಾವಣಾ ಜಾಹಿರಾತು ಪ್ರಸಾರ ಕುರಿತಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ

Webdunia
ಸೋಮವಾರ, 8 ಮೇ 2023 (15:00 IST)
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ.
 
ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.
 
ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.
 
ಟಿವಿ/ರೇಡಿಯೋ/ಕೇಬಲ್ ನೆಟ್.ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.
 
ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.
 
ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 126 ರ ವ್ಯಾಪ್ತಿಯಲ್ಲಿ ಬರುತ್ತದೆ.
 
ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರ ಸಂಜೆ 6.30 ಗಂಟೆಯವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments