Publish Date: Wed, 01 Jul 2020 (21:01 IST)
Updated Date: Wed, 01 Jul 2020 (21:03 IST)
ಹೆಚ್.ವಿಶ್ವನಾಥ್ ಅವರಿಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ.
ಹೀಗಂತ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಹೆಚ್.ವಿಶ್ವನಾಥ್ ಅವರಿಗಾಗಿ ತಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ.
ಯಾದಗಿರಿಯ ಸುರಪುರದಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಹೆಚ್.ವಿಶ್ವನಾಥ್ ಮುಂದಿನ ದಿನಗಳಲ್ಲಿ ಎಂ ಎಲ್ ಸಿ ಆಗುತ್ತಾರೆ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಒಂದಷ್ಟು ಕುತೂಹಲ ಮೂಡಿಸಿದೆ.