Webdunia - Bharat's app for daily news and videos

Install App

ಹನಿಟ್ರ್ಯಾಪ್‌ ಪ್ರಕರಣ ಸಿಬಿಐಗೆ ವಹಿಸಿ: ಪರಮೇಶ್ವರ್‌ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

Sampriya
ಶುಕ್ರವಾರ, 21 ಮಾರ್ಚ್ 2025 (14:24 IST)
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಸಚಿವರನ್ನೇ ಈ ಹನಿಟ್ರ್ಯಾಪ್‌ಗೆ ಒಳಪಡಿಸಲು ಯತ್ನಿಸಿರುವುದು ವಿಧಾನಸಭೆಯಲ್ಲಿ ಇಂದು ಮತ್ತೆ ಹೈಡ್ರಾಮಾ ನಡೆಯಿತು.

ಈ ಮಧ್ಯೆ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಪತ್ರ ಬರೆದು, ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ‍್ಯಾಪ್ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ‍್ಯಾಪ್ ವಿಚಾರವನ್ನು ಪ್ರಸ್ತಾಪಿಸಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಜನಪ್ರತಿನಿಧಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ‍್ಯಾಪ್ ಮಾಡಲಾಗುತ್ತಿದೆ. ಜನಪ್ರತಿನಿಧಿಗಳ ಭದ್ರತೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಗುರುವಾರ ಈ ವಿಚಾರ ಪ್ರಸ್ತಾಪ ಮಾಡಿದ ಯತ್ನಾಳ್, ರಾಜ್ಯದಲ್ಲಿ ಸಹಕಾರಿ ಸಚಿವರ ಮೇಲೆ ಹನಿಟ್ರ‍್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದೆ. ಇದೊಂದು ಕೆಟ್ಟ ಸಂಸ್ಕೃತಿ. ಜನ ಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ್ದರು.

ತಕ್ಷಣ ಕೆ.ಎನ್ ರಾಜಣ್ಣ ಮಾತನಾಡಿ, ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್ ತಯಾರಾಗಿದೆ. ನನ್ನ ಮೇಲೂ ಹನಿಟ್ರ‍್ಯಾಪ್ ಯತ್ನ ನಡೆದಿದೆ ಸ್ಫೋಟಕ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments