Webdunia - Bharat's app for daily news and videos

Install App

ಹಾಸನ ಟಿಕೆಟ್ ಪ್ರಜ್ವಲ್ ಹೆಗಲಿಗಿಟ್ಟ ದೇವೇಗೌಡರು

Webdunia
ಮಂಗಳವಾರ, 12 ಮಾರ್ಚ್ 2019 (14:07 IST)
ಲೋಕಸಭಾ ಚುನಾವಣಾ ದಿನಾಂಕ ಪ್ರಕಟ ಹಿನ್ನಲೆಯಲ್ಲಿ ಹಾಸನದಲ್ಲಿ ಗರಿಗೆದರಿದ ರಾಜಕೀಯ ಬೆಳವಣಿಗೆ ಕುತೂಹಲ ಮೂಡಿಸಿದೆ.

ಲೋಕಸಮರದ ಅಭ್ಯರ್ಥಿಗಳ ಬಗ್ಗೆ ನಡೆತಿದೆ ಭಾರೀ ಲೆಕ್ಕಾಚಾರ. ಮೊಮ್ಮಗನಿಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು‌ ಮುಂದಾದ ದೇವೇಗೌಡರ ನಡೆಯತ್ತ ಚಿತ್ತ ಹರಿಯುವಂತಾಗಿದೆ. 6 ಬಾರಿ  ಪ್ರತಿನಿಧಿಸಿದ್ದ ಹಾಸನವನ್ನು ಪ್ರಜ್ವಲ್ ಹೆಗಲಿಗಿಟ್ಟ ದೇವೇಗೌಡರು ರಾಜಕೀಯಕ್ಕೆ ಕುಟುಂಬದ ಮತ್ತೊಂದು ದಾಳವನ್ನು ಉರುಳಿಸಿದ್ದಾರೆ.

ಜೆಡಿಎಸ್ ಜೊತೆಗಿನ ಒಪ್ಪಂದಕ್ಕೆ ‌ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ಹಾಸನದಿಂದ ಪ್ರಜ್ವಲ್ ಮೈತ್ರಿ ಅಭ್ಯರ್ಥಿ ಎಂಬುದು ಬಹುತೇಕ ಖಚಿತವಾದಂತಿದೆ ಎಂದು ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ.

ಬಿಜೆಪಿಯಿಂದ ಕಣಕ್ಕಿಳಿದು ಲೋಕಸಮರ ಎದುರಿಸಲು ಎ.ಮಂಜು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದ ಬೆನ್ನಲೆ ಪಕ್ಷ ತೊರೆಯೋ ನಿರ್ಧಾರಕ್ಕೆ ಬಂದಿರೋ ಎ.ಮಂಜು ಕಳೆದ ಲೋಕ ಚುನಾವಣೆಯಲ್ಲಿ ದೇವೇಗೌಡರಿಗೆ ಪ್ರಬಲ ಪೈಪೋಟಿ ನೀಡಿದ್ದರು.

ದೇವೇಗೌಡರ ಗೆಲುವಿನ ಅಂತರವನ್ನು ಒಂದು ಲಕ್ಷಕ್ಕಿಳಿಸಿದ್ದ ಎ.ಮಂಜುರನ್ನು ಮುಂದಿಟ್ಟುಕೊಂಡು ಮತ್ತೊಂದೆಡೆ ಕಾಂಗ್ರೆಸ್ ಅಸಮಧಾನವನ್ನೇ ಹೈ ಜಾಕ್ ಮಾಡೋ ಪ್ಲಾನ್ ನಲ್ಲಿ ಬಿಜೆಪಿ ನಿರತರವಾಗಿದೆ. ಕಾರ್ಯಕರ್ತರೊಂದಿಗೆ   ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಎ.ಮಂಜು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments