Webdunia - Bharat's app for daily news and videos

Install App

ಮೊಮ್ಮಗನಿಗಾಗಿ ಆರೋಗ್ಯವನ್ನೂ ಬದಿಗೊತ್ತಿ ಚನ್ನಪಟ್ಟಣಕ್ಕೆ ದೇವೇಗೌಡರ ಪ್ರವೇಶ

Krishnaveni K
ಸೋಮವಾರ, 4 ನವೆಂಬರ್ 2024 (11:16 IST)
ಚನ್ನಪಟ್ಟಣ: ಮೊಮ್ಮಗ ನಿಖಿಲ್ ಕುಮಾರಸ್ವಾಮಿಗಾಗಿ ತಮ್ಮ ಆರೋಗ್ಯವನ್ನೂ ಪಣಕ್ಕಿಟ್ಟು ಇಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ.

ಇತ್ತೀಚೆಗೆ ದೇವೇಗೌಡರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಕಡಿಮೆ. ವಯೋಸಹಜವಾದ ಅವರ ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಸಂಸತ್ತು ಬಿಟ್ಟರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಕಡಿಮೆ. ಆದರೆ ಈಗ ಮೊಮ್ಮಗ ನಿಖಿಲ್ ನನ್ನು ಗೆಲ್ಲಿಸಲು ತಾವೇ ರಂಗಕ್ಕಿಳಿಯಲು ಮುಂದಾಗಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆ ಗೌಡರ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿದೆ. ಎರಡು ಬಾರಿ ಸೋತಿದ್ದ ನಿಖಿಲ್ ಚನ್ನಪಟ್ಟಣದಲ್ಲಿ ಕಣಕ್ಕಿಳಿಯಬೇಕು ಎಂಬುದು ದೇವೇಗೌಡರ ಒತ್ತಾಸೆಯೂ ಆಗಿತ್ತು. ತಮ್ಮ ಬಳಿ ನಿಖಿಲ್ ನನ್ನು ಕರೆಸಕೊಂಡು ದೇವೇಗೌಡರು ಬುದ್ಧಿ ಹೇಳಿದ ಬಳಿಕ ನಿಖಿಲ್ ಅಭ್ಯರ್ಥಿಯಾಗಿದ್ದರು.

ಇದೀಗ ಮೂರನೇ ಬಾರಿ ನಿಖಿಲ್ ಸೋತರೆ ಎದುರಾಳಿಗಳ ವಿರುದ್ಧ ಜಾರಿ ಬಿದ್ದಂತಾಗಲಿದೆ. ಹೀಗಾಗಿ ಚನ್ನಪಟ್ಟಣ ಚುನಾವಣೆಯಲ್ಲಿ ಶತಾಯ ಗತಾಯ ನಿಖಿಲ್ ಗೆಲ್ಲಿಸಲು ತಂದೆ ಕುಮಾರಸ್ವಾಮಿ ಈಗಾಗಲೇ ಹಗಲಿರುಳು ಎನ್ನದೇ ಓಡಾಡುತ್ತಿದ್ದಾರೆ. ಇದೀಗ ದೊಡ್ಡ ಗೌಡರ ಆಗಮನ ಮತ್ತಷ್ಟು ಬಲ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments