Webdunia - Bharat's app for daily news and videos

Install App

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

ಕೃಷ್ಣವೇಣಿ ಕೆ
ಶುಕ್ರವಾರ, 19 ಜೂನ್ 2026 (09:20 IST)
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಫಲಿತಾಂಶದ ಬಳಿಕ ಗರಂ ಆಗಿರುವ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಜಿಟಿ ದೇವೇಗೌಡ ಬಗ್ಗೆ ಶಾಕಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಇತ್ತ ಮಿತ್ರ ಪಕ್ಷ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಉಳಿದ ಐದೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ. ಇದಕ್ಕೆ ಅಡ್ಡಮತದಾನವೇ ಪ್ರಮುಖ ಕಾರಣವಾಗಿದೆ.

ಇದು ಕುಮಾರಸ್ವಾಮಿ ಸಿಟ್ಟಿಗೆ ಕಾರಣವಾಗಿದೆ. ಜೆಡಿಎಸ್ ನ ಶಾಸಕರಾಗಿರುವ ಜಿಟಿ ದೇವೇಗೌಡ ಅಡ್ಡಮತದಾನ ಮಾಡಿರಬಹುದು ಎಂಬ ಶಂಕೆಯಿದೆ. ಈ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಜಿಟಿ ದೇವೇಗೌಡರ ಹೆಸರೇ ಎತ್ತಲೇ ಬೇಡಿ. ನನ್ನ ಮುಂದೆ ಅವರ ಹೆಸರೇ ಕರೀಬೇಡಿ. ಕಳೆದ ಒಂದು ವರ್ಷದಲ್ಲಿ ನಾನು ಅವರ ಹೆಸರನ್ನು ಏನಾದರೂ ಮಾತನಾಡಿದ್ದೀನಾ? ಮೊನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಭೆ ಆಯ್ತು, ಅವರ ಹೆಸರು ಏನಾದ್ರೂ ಎತ್ತಿದ್ದೀನಾ? ಅವರ ಹೆಸರು ಚರ್ಚೆ ಮಾಡೋದೇ ಬೇಡ. ಅಂತಿಮವಾಗಿ ಯಾರು ಯಾರೇ ಹೋಗಿ ಚರ್ಚೆ ಮಾಡಿದರೂ ಅಂತಿಮ ನಿರ್ಣಯ ಕಾರ್ಯಕರ್ತರ ಅಭಿಪ್ರಾಯವನ್ನು ಇಟ್ಟುಕೊಂಡು ನಾನೇ ಮಾಡ್ತೀನಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments