Webdunia - Bharat's app for daily news and videos

Install App

ಎಚ್ ಡಿ ಕುಮಾರಸ್ವಾಮಿಗೆ ಕಾರ್ಯಕರ್ತರ ಸಭೆ ಕರೆಯೋದು ಅಳೋದೇ ಕೆಲಸ

Krishnaveni K
ಗುರುವಾರ, 24 ಅಕ್ಟೋಬರ್ 2024 (14:42 IST)
ಚನ್ನಪಟ್ಟಣ: ಉಪಚುನಾವಣೆಗೆ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಿರುವ ಸಿಪಿ ಯೋಗೇಶ್ವರ್ ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಬಿಜೆಪಿಯಲ್ಲಿದ್ದಾಗ ತಮಗೆ ಟಿಕೆಟ್ ಕೊಡದೇ ಇರುವುದಕ್ಕೆ ಅವರೇ ಕಾರಣ ಎಂದಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಜೊತೆ ಮೈತ್ರಿ ಆದಾಗ ಕಳೆದ ಲೋಕಸಭಾ ಚುನಾವಣೆ ಸಂದರ್ಭದಿಂದಲೇ ನನಗೆ ಟಿಕೆಟ್ ಕೊಡುವುದು ಇಷ್ಟವಿರಲಿಲ್ಲ. ಆಗೆಲ್ಲಾ ಚನ್ನಪಟ್ಟಣ ಉಪಚುನಾವಣೆಗೆ ಇನ್ನೂ ಸಮಯವಿದೆಯಲ್ವಾ ಎಂದು ವ್ಯಂಗ್ಯ ಮಾಡುತ್ತಲೇ ಬಂದರು. ಆದರೆ ಅವರಿಗೆ ನಾನು ಸ್ಪರ್ಧೆ ಮಾಡುವುದು ಇಷ್ಟವಿರಲಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತಾಗಿದೆ.

ಯಾವಾಗ ನನ್ನ ರಾಜಕೀಯ ಭವಿಷ್ಯಕ್ಕೆ ಅಲ್ಲಿದ್ದರೆ ಪ್ರಯೋಜನವಿಲ್ಲವೆನಿಸಿತೋ ಹಾಗಾಗಿ ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿದೆ. ಚನ್ನಪಟ್ಟಣ ಉಪಚುನಾವಣೆಗೆ ಕುಮಾರಸ್ವಾಮಿಗೆ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನೇ ನಿಲ್ಲಿಸಬೇಕು ಎಂದು ಆಸೆ. ಆದರೆ ಅಲ್ಲಿ ಕೆಲವು ತಾಲೂಕು ಮಟ್ಟದ ಕಾರ್ಯಕರ್ತರಿಂದ ವಿರೋಧವಿತ್ತು.

ಹೀಗಾಗಿ ಆಗಾಗ ಕಾರ್ಯಕರ್ತರ ಸಭೆ ನಡೆಸೋದು, ಅವರ ಮುಂದೆ ಅಳುವುದು, ಭಾವನಾತ್ಮಕವಾಗಿ ಅವರ ಮನಸ್ಸು  ಸೆಳೆಯಲು ಪ್ರಯತ್ನಿಸುವುದು ಮಾಡುತ್ತಲೇ ಇದ್ದರು. ಈಗ ನನ್ನ ವಿರುದ್ಧ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಿದರೂ ನಾನೇ ಗೆಲ್ತೀನಿ ಎನ್ನುವ ಭರವಸೆ ನನಗಿದೆ ಎಂದು ಯೋಗೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments