Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಗಳಿಗೂ ಸಮನಾಗಿ ಹಣ ಕೊಡಲ್ವಲ್ಲಾ: ಎಚ್ ಡಿ ಕುಮಾರಸ್ವಾಮಿ

Krishnaveni K
ಬುಧವಾರ, 24 ಜುಲೈ 2024 (12:14 IST)
ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ತನ್ನ ಮಿತ್ರ ಪಕ್ಷಗಳ ರಾಜ್ಯಗಳಿಗೆ ಮಾತ್ರ ಮೋದಿ ಸರ್ಕಾರದ ಬಹುಪಾಲು ಕೊಟ್ಟಿದೆ ಎಂಬ ಆರೋಪಗಳಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಬಜೆಟ್ ಘೋಷಣೆಯಾಗುತ್ತಿದ್ದಂತೇ ಇತ್ತ ಸಿಎಂ ಸಿದ್ದರಾಮಯ್ಯ, ಕರ್ನಾಟಕದಿಂದಲೇ ಸಂಸದೆಯಾಗಿ ಆಯ್ಕೆಯಾಗಿ ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ಬಾರಿಯೂ ಚೊಂಬು ಕೊಟ್ಟಿದೆ ಎಂದು ಲೇವಡಿ ಮಾಡಿದ್ದರು.

ಇದೀಗ ಸಿದ್ದರಾಮಯ್ಯ ಟೀಕೆಗಳಿಗೆ ಉತ್ತರಿಸಿರುವ ಎಚ್ ಡಿ ಕುಮಾರಸ್ವಾಮಿ, ‘ಸಿದ್ದರಾಮಯ್ಯನವರು ಏನು ತಮ್ಮ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ಸಮನಾಗಿ ಹಣ ಹಂಚಿಕೆ ಮಾಡ್ತಾರಾ?’ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಕೂಡಾ ಹಣ ಹಂಚಿಕೆಯಲ್ಲಿ ಒಂದೊಂದು ಜಿಲ್ಲೆಗೆ ಸರಿಯಾಗಿ ಕೊಟ್ಟಿಲ್ಲ ಎಂದಿದ್ದಾರೆ.

ಹೀಗಿರುವಾಗ ಕಾಂಗ್ರೆಸ್ಸಿಗರಿಗೆ ಕೇಂದ್ರ ಸರ್ಕಾರವನ್ನು ಟೀಕಿಸುವ ನೈತಿಕತೆಯೇ ಇಲ್ಲ ಎಂದಿದ್ದಾರೆ. ನಾವು ಕೇಂದ್ರ ಮಂತ್ರಿಗಳು ಎಂಬ ಮಾತ್ರಕ್ಕೇ ಒಂದೇ ತಿಂಗಳಲ್ಲಿ ಎಲ್ಲಾ ಯೋಜನೆಗಳನ್ನು ರಾಜ್ಯಕ್ಕೆ ತಂದು ಇಳಿಸಲು ಸಾಧ್ಯವಿಲ್ಲ. ಮುಂದೆ ಮೋದಿಯವರಿಗೆ ಮನವರಿಕೆ ಮಾಡಿ ಒಂದೊಂದೇ ಯೋಜನೆಗಳನ್ನು ರಾಜ್ಯಕ್ಕೆ ತರಲು ಶ್ರಮಿಸುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments