Webdunia - Bharat's app for daily news and videos

Install App

ಪ್ರಚಾರಕ್ಕೆ ಬಾರದ ಸುಮಲತಾ ಮೇಲೆ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ

Krishnaveni K
ಶುಕ್ರವಾರ, 26 ಏಪ್ರಿಲ್ 2024 (14:50 IST)
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಟಿಕೆಟ್ ಎಚ್ ಡಿ ಕುಮಾರಸ್ವಾಮಿ ಪಾಲಾದ ಬಳಿಕ ಹಾಲಿ ಸಂಸದೆ ಸುಮಲತಾ ಅಂಬರೀಶ್ ಒಮ್ಮೆಯೂ ಇಲ್ಲಿ ಪ್ರಚಾರಕ್ಕೆ ಬಂದಿಲ್ಲ. ಇದಕ್ಕೆ ಎಚ್ ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಕುಮಾರಸ್ವಾಮಿ ಬೇಡಿಕೆಯಿಟ್ಟಿದ್ದರು. ಅತ್ತ ಸುಮಲತಾ ಕೂಡಾ ಮಂಡ್ಯದಲ್ಲಿಯೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಕೊನೆಗೆ ಕುಮಾರಸ್ವಾಮಿ ಪಾಲಾಯಿತು.

ಇದು ಸುಮಲತಾ ಅಸಮಾಧಾನಕ್ಕೆ ಕಾರಣವಾಗಿತ್ತು. ಹಾಗಿದ್ದರೂ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ನಡೆಸಲು ಬಂದಿರಲಿಲ್ಲ. ನನ್ನನ್ನು ಯಾರೂ ಕರೆದಿಲ್ಲ ಅದಕ್ಕೆ ಬಂದಿಲ್ಲ ಎಂದು ಸುಮಲತಾ ಹೇಳಿಕೊಂಡಿದ್ದರು.

ಇದು ಎಚ್ ಡಿಕೆ ಅಸಮಾಧಾನಕ್ಕೆ ಕಾರಣವಾಗಿದೆ. ಸುಮಲತಾ ಮನೆಗೇ ಹೋಗಿ ಸಹಕಾರ ಕೊಡುವಂತೆ ಕೇಳಿದ್ದೆ. ಇನ್ನು ಹೇಗೆ ಕರೆಯಬೇಕಿತ್ತು. ಮಂಡ್ಯದಲ್ಲಿ ಅಂಬರೀಶ್ ಅಭಿಮಾನಿಗಳು ನನಗೆ ಸಹಕಾರ ಕೊಟ್ಟಿದ್ದಾರೆ. ಆದರೆ ಸುಮಲತಾ ಬರಲಿಲ್ಲ ಎಂದು ಎಚ್ ಡಿಕೆ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments