Publish Date: Thu, 06 Sep 2018 (12:55 IST)
Updated Date: Thu, 06 Sep 2018 (12:57 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆಂದು ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ ಬಿಜೆಪಿ ನಾಯಕರು ಕೊಡಗಿನ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ ಎಂದು ಸಚಿವ ಎಚ್ ಡಿ ರೇವಣ್ಣ ಆರೋಪಿಸಿದ್ದಾರೆ.
ಪ್ರವಾಹ ಸಂತ್ರಸ್ತರಿಗೆಂದು ಸಂಗ್ರಹಿಸಿದ ಹಣವನ್ನು ಕಾರ್ಯಕರ್ತರಿಗೆ ಹಂಚಿದ್ದು ಬಿಟ್ಟರೆ ಬಿಜೆಪಿ ಸಾಧನೆಯೇನೂ ಇಲ್ಲ. ಸಂತ್ರಸ್ತರಿಗೆ ಅವರು ಆರ್ಥಿಕವಾಗಿ ನೆರವಾಗಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.
ಇನ್ನು ಉತ್ತರ ಕರ್ನಾಟಕವನ್ನು ಜೆಡಿಎಸ್ ನಿರ್ಲಕ್ಷಿಸಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿದ್ದರೆ ಇಲ್ಲಿನ ರಸ್ತೆಗಳು ಗುಂಡಿ ಬಿದ್ದು ಹೋಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.