Publish Date: Tue, 21 Nov 2023 (17:20 IST)
Updated Date: Tue, 21 Nov 2023 (18:40 IST)
ಬಿಜೆಪಿ ಜತೆ ಮೈತ್ರಿ ನಿರ್ಧಾರ ಕೈಗೊಂಡಿರುವ ಜೆಡಿಎಸ್ ಪಕ್ಷವು ಇದೀಗ ಹಿಂದುತ್ವವನ್ನು ಅಪ್ಪಿಕೊಳ್ಳುವ ಮೂಲಕ ತನ್ನ ಇಮೇಜ್ ಬದಲಾಯಿಸಿಕೊಳ್ಳಲು ಮುಂದಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಸೇರಿ ದತ್ತಮಾಲೆ ಧಾರಣೆ ಮಾಡುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.